Advertisement

Central government ಪ್ರವಾಹ, ಕೋವಿಡ್ ವೇಳೆಯೂ ರಾಜ್ಯಕ್ಕೆ ನೆರವಾಗಿರಲಿಲ್ಲ : ಹೆಬ್ಬಾಳಕರ್

08:14 PM Mar 24, 2024 | Team Udayavani |

ಬೆಳಗಾವಿ: ಕೇಂದ್ರ ಸರಕಾರವು ರಾಜ್ಯಕ್ಕೆ ಪ್ರವಾಹ, ಕೋವಿಡ್ ಸಮಯದಲ್ಲಿಸಹಾಯ ಮಾಡಿಲ್ಲ, ಕೊನೆಯ ಪಕ್ಷ ಬರಗಾಲದಲ್ಲಾದರೂ ಸಹಾಯ ಮಾಡಬಹುದು ಎನ್ನುವ ನಿರೀಕ್ಷೆ ಇತ್ತು. ಆದರೆ ಈಗಲೂ ಸಹಾಯಕ್ಕೆ ಬರುತ್ತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಹೇಳಿಕೆ ನೀಡಿದ್ದಾರೆ.

Advertisement

ಬೆಳಗಾವಿಯಲ್ಲಿ ಮಾತನಾಡಿದ ಅವರು ನಾವು ನ್ಯಾಯಾಲಯದ ಮೂಲಕ ನಮ್ಮ ರಾಜ್ಯದ ಜನರಿಗೆ ನ್ಯಾಯ ಕೊಡಿಸುವ ನಿರ್ಧಾರಕ್ಕೆ ಬಂದಿದ್ದೇವೆ ಎಂದರು.

ಬಿಜೆಪಿಯವರ ರಾಮ ಜಪದ ಕುರಿತು ಪ್ರತಿಕ್ರಿಯೆ ನೀಡಿದ ಅವರು ನಾನು ಕೂಡ ರಾಮನ ಭಕ್ತಳೇ, ನಮ್ಮ ಸಂಸ್ಕೃತಿ ಬಿಡುವುದಿಲ್ಲ. ಆದರೆ ನಾನು ಅಭಿವೃದ್ಧಿ ಪರ ಚುನಾವಣೆ ಮಾಡುತ್ತೇನೆ. ಅಭಿವೃದ್ಧಿ ನೋಡಿ ಮತ ಕೊಡಿ ಎಂದು ಕೇಳುತ್ತೇನೆ. ನಮ್ಮಲ್ಲಿ ಜಾತಿಭೇದವಿಲ್ಲ, ಪ್ರಾದೇಶಿಕ ಭೇದವಿಲ್ಲ. ಎಲ್ಲರಿಗೂ ಗ್ಯಾರಂಟಿ ಯೋಜನೆಯ ಲಾಭ ನೀಡಿದ್ದೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next