Advertisement

ಕೇಂದ್ರ ಸರಕಾರ ರಾಜ್ಯದ ನೆರೆ ಹಾನಿಯ ಸಾಕ್ಷಿ ಕೇಳುತ್ತಿದೆ

10:41 AM Oct 05, 2019 | keerthan |

ಬೆಂಗಳೂರು: ರಾಜ್ಯ ಸರಕಾರ ಕಳುಹಿಸಿರುವ ನೆರೆ ಪರಿಹಾರ ವರದಿಯನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ. ಮತ್ತೆ ವರದಿ ಕಳಿಸುವಂತೆ ರಾಜ್ಯಕ್ಕೆ ನಿರ್ದೇಶನ ನೀಡಿದೆ. ಹಾನಿ ಅಂದಾಜಿನ ಸಾಕ್ಷಿಯನ್ನು ಕೇಂದ್ರ ಕೇಳುತ್ತಿದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ನೀಡಿದ್ದಾರೆ.

Advertisement

ಎನ್ ಡಿಆರ್ ಎಫ್ ನಾರ್ಮ್ಸ್ ಅನ್ನು ನಾವು ಕೇಳಿದ್ದೇವೆ. ಅದನ್ನೇ ಕೇಂದ್ರ ಸರ್ಕಾರ ತಿರಸ್ಕರಿಸಿದೆ. ರಾಷ್ಟ್ರೀಯ ವಿಪತ್ತು ನೆರವು ಇನ್ನೆಲ್ಲಿ ನೀಡಲಿದೆ ಎಂದರು.

2009ರಲ್ಲಿ ಪ್ರವಾಹ ಆದಾಗ ಪ್ರಧಾನಿ ಮನಮೋಹನ್ ಸಿಂಗ್ ಬಂದಿದ್ದರು. ಸಮೀಕ್ಷೆ ಮಾಡಿ 1600 ಕೋಟಿ ಬಿಡುಗಡೆ ಮಾಡಿದ್ದರು. ಅಂದಿನ ಪ್ರವಾಹಕ್ಕಿಂತ ಇಂದು ಹೆಚ್ಚಿನ ಹಾನಿಯಾಗಿದೆ. ಸಂತ್ರಸ್ಥರ ಬದುಕು ಬೀದಿಗೆ ಬಿದ್ದಿದೆ. ಮನೆ ಮಠಗಳಿಲ್ಲ,ಶಾಲಾ ಕೊಠಡಿಗಳು ಇಲ್ಲ. ಈ ಪರಿಸ್ಥಿತಿ ಬಗ್ಗೆ ವರದಿಯನ್ನೂ ಸರಿಯಾಗಿ ಕಳಿಸಿಲ್ಲ ಎಮದು ಕೇಂದ್ರ ಸರಕಾರದ ವಿರುದ್ಧ ಹರಿಹಾಯ್ದರು.

ರಾಜ್ಯದ 25 ಬಿಜೆಪಿ ಸಂಸದರು ಬಾಯಿ ಬಿಡುತ್ತಿಲ್ಲ. ದಿನಕ್ಕೊಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಚಕ್ರವರ್ತಿ ಸೂಲಿಬೆಲೆ, ಬಸವನಗೌಡ ಪಾಟೀಲ್ ಯತ್ನಾಳ ಅವರ ಹೇಳಿಕೆಗಳನ್ನು ಅಭಿನಂದಿಸಬೇಕು. ಅವರು ಯಾವ ಪಕ್ಷದವರೇ ಆಗಿರಲಿ. ಇಂತ ಸಂದರ್ಭದಲ್ಲಿ ಗಟ್ಟಿ ಧ್ವನಿ ಎತ್ತಿದ್ದಾರೆ ಎಂದು ಎಂ.ಬಿ ಪಾಟೀಲ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next