Advertisement
ನಗರದ ನಯನ ಸಭಾಂಗಣದಲ್ಲಿ ಮಂಗಳವಾರ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಹಮ್ಮಿಕೊಂಡಿದ್ದ “2017ನೇ ಸಾಲಿನ ಗೌರವ ಪ್ರಶಸ್ತಿ’ ಮತ್ತು “2016ನೇ ಸಾಲಿನ ಪುಸ್ತಕ ಬಹುಮಾನ ವಿತರಣೆ’ ಸಮಾರಂಭದಲ್ಲಿ ಗೌರವ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಅಕಾಡೆಮಿ-ಪ್ರಾಧಿಕಾರಗಳೂ ಸೇರಿದಂತೆ ಎಲ್ಲ ಅಕಾಡೆಮಿಗಳ ಅಧ್ಯಕ್ಷರ ಅಧಿಕಾರಾವಧಿ ಮೊಟಕುಗೊಳ್ಳುತ್ತದೆ.
Related Articles
Advertisement
“ಭಾಷಾ ಬಾಂಧವ್ಯದ ಕೊಂಡಿ’: ಪ್ರಾಧಿಕಾರದ ಅಧ್ಯಕ್ಷ ಪ್ರೊ.ಕೆ. ಮರುಳ ಸಿದ್ದಪ್ಪ ಪ್ರಾಸ್ತಾವಿಕ ಮಾತನಾಡಿ, ಭಾಷೆಗಳ ನಡುವೆ ಬಾಂಧವ್ಯ ಬೆಸೆಯುವುದರಲ್ಲಿ ಅನುವಾದ ಕ್ಷೇತ್ರ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ. ಭಾಷಾ ಭಾರತಿ ಆರಂಭದಿಂದಲೂ 340 ಪುಸ್ತಕಗಳನ್ನು ಅನುವಾದ ಮಾಡಿದೆ. ನನ್ನ ಆಡಳಿತಾವಧಿಯಲ್ಲೇ 60 ಪುಸ್ತಕಗಳು ಅನುವಾದಕ್ಕೆ ಸಿದ್ಧವಾಗಿವೆ. ಡಾ.ಅಂಬೇಡ್ಕರ್ ಅವರ ಸಮಗ್ರ ಬರಹಗಳ ಸಂಪುಟ ಕೂಡ ಮರುಮುದ್ರಣಕ್ಕೆ ತಯಾರಾಗಿದೆ ಎಂದು ವಿವರಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎನ್.ಆರ್. ವಿಶುಕುಮಾರ್ ಮಾತನಾಡಿ, ಅಕಾಡೆಮಿ ಅಥವಾ ಪ್ರಾಧಿಕಾರ ಪ್ರಕಟಿಸುವ ಎಲ್ಲ ಕೃತಿಗಳನ್ನು ಉಚಿತವಾಗಿ ವಿಶ್ವವಿದ್ಯಾಲಯಗಳು, ಕಾಲೇಜುಗಳು, ಸಾರ್ವಜನಿಕ ಗ್ರಂಥಾಲಯಗಳಿಗೆ ಪೂರೈಸಲು ಆದೇಶ ಹೊರಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಅನುವಾದಕ ಮತದಾನಿದ್ದಂತೆ: “ಟಾಲ್ಸ್ಟಾಯ್, ರವೀಂದ್ರನಾಥ ಟ್ಯಾಗೋರ್ ಎಲ್ಲರಿಗೂ ಗೊತ್ತು. ಆದರೆ, ಅವರನ್ನು ಪರಿಚಯಿಸಿದ ಅನುವಾದಕರು ಮಾತ್ರ ಯಾರಿಗೂ ಗೊತ್ತಿಲ್ಲ’. ಎಷ್ಟೋ ಅನುವಾದಕರು ಬೇರೆ ಬೇರೆ ಭಾಷೆಗಳಲ್ಲಿ ಇರುವ ಕೃತಿಗಳನ್ನು ಅನುವಾದಿಸಲು ತಮ್ಮ ಬದುಕನ್ನು ಮೀಸಲಿಟ್ಟಿದ್ದಾರೆ. ಆದರೆ, ಅವರಾರೂ ನೆನಪಿನಲ್ಲಿ ಇರುವುದೇ ಇಲ್ಲ. ಅನುವಾದಕ ಒಂದು ರೀತಿ ಮತದಾರರಂತೆ. ಗೆದ್ದುಬಂದ ಶಾಸಕರು, ನಂತರದಲ್ಲಿ ಆ ಕ್ಷೇತ್ರದ ಮತದಾರರನ್ನು ಮರೆತುಬಿಡುತ್ತಾರೆ ಎಂದು ಪ್ರೊ.ಸಿ.ಎನ್. ರಾಮಚಂದ್ರನ್ ಬೇಸರ ವ್ಯಕ್ತಪಡಿಸಿದರು.