Advertisement

ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಹಂಗಾಮಿ ಸಿಜೆ

12:37 PM Dec 06, 2017 | Team Udayavani |

ಬೆಂಗಳೂರು: ಕರ್ನಾಟಕ ವಿದ್ಯುತ್‌ತ್ಛಕ್ತಿ ನಿಯಂತ್ರಣ ಆಯೋಗದ ಸದಸ್ಯ ಎಚ್‌.ಡಿ ಅರುಣ್‌ಕುಮಾರ್‌ ನೇಮಕಾತಿ ಆದೇಶ ರದ್ದುಕೋರಿರುವ ರಿಟ್‌ ಅರ್ಜಿ ವಿಚಾರಣೆಯಿಂದ ಹೈಕೋರ್ಟ್‌ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್‌.ಜಿ ರಮೇಶ್‌ ಹಾಗೂ ನ್ಯಾಯಮೂರ್ತಿ ಪಿ.ಎಸ್‌ ದಿನೇಶ್‌ ಕುಮಾರ್‌ ಅವರಿದ್ದ ವಿಭಾಗೀಯ ಪೀಠ ಹಿಂದೆ ಸರಿದಿದೆ.

Advertisement

ಕರ್ನಾಟಕ ವಿದ್ಯುತ್‌ತ್ಛಕ್ತಿ ನಿಯಂತ್ರಣ ಆಯೋಗದ ಸದಸ್ಯ ಎಚ್‌.ಡಿ ಅರುಣ್‌ಕುಮಾರ್‌ ನೇಮಕಾತಿ ಮಾಡಿ ಇಂಧನ ಇಲಾಖೆಯ ಅಧೀನ ಕಾರ್ಯದರ್ಶಿ ಫೆಬ್ರವರಿ 2014ರಂದು ಹೊರಡಿಸಿರುವ ಆದೇಶ ರದ್ದು ಕೋರಿ ಬಿ. ಸಚ್ಚಿದಾನಂದ ಎಂಬುವವರು ರಿಟ್‌ ಅರ್ಜಿ ಸಲ್ಲಿಸಿದ್ದಾರೆ. ಈ ನೇಮಕಾತಿ ಕಾನೂನು ಬಾಹಿರಾಗಿದೆ ಎಂಬುದು ಅರ್ಜಿದಾರರ ಆಕ್ಷೇಪವಾಗಿದೆ.

ಈ ಅರ್ಜಿ ವಿಚಾರಣೆ ಮಂಗಳವಾರ ಹಂಗಾಮಿ ಮುಖ್ಯನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ಪೀಠದ ಮುಂದೆ ಬಂದಿತ್ತು. ಆದರೆ , ನ್ಯಾಯಪೀಠ ಕೆಲ ಕಾರಣಗಳಿಂದ ಈ ಅರ್ಜಿ ವಿಚಾರಣೆ ಮತ್ತೂಂದು ನ್ಯಾಯಪೀಠ ನಡೆಸಲಿ ಎಂದು ತಿಳಿಸಿ ವಿಚಾರಣೆಯಿಂದ ಹಿಂದೆ ಸರಿಯಿತು.

Advertisement

Udayavani is now on Telegram. Click here to join our channel and stay updated with the latest news.

Next