Advertisement

Sandalwood: ಹಿರಿಯ ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಸಿಎಂ

10:48 PM Dec 03, 2023 | Team Udayavani |

ನೆಲಮಂಗಲ: ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಹಿರಿಯ ನಟಿ ಲೀಲಾವತಿ ಅವರನ್ನು ಆಸ್ಪತ್ರೆಗೆ ದಾಖಲಿಸಿದರೆ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ತಾಲೂಕಿನ ಸೋಲದೇವನಹಳ್ಳಿಯ ಡಾ| ಲೀಲಾವತಿ ಅವರ ತೋಟದ ಮನೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ ಮಾತನಾಡಿದರು.

Advertisement

ಲೀಲಾವತಿಯವರು ಅನೇಕ ಬಾರಿ ರೈತರ ಜಮೀನು ವಿಚಾರವಾಗಿ ನನ್ನನ್ನು ಭೇಟಿಯಾಗಿದ್ದರು. ಅವರಿಗೀಗ ವಯೋಸಹಜ ಆರೋಗ್ಯ ಸಮಸ್ಯೆ ಎದುರಾಗಿದೆ. ಅವರಿಗೆ ಅಗತ್ಯವಿರುವ ಎಲ್ಲ ಸಹಕಾರ ನೀಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ಮಾಜಿ ಸಚಿವ ಎಚ್‌.ಎಂ. ರೇವಣ್ಣ, ನಟ ವಿನೋದ್‌ರಾಜ್‌, ಜಿಲ್ಲಾಧಿಕಾರಿ ಶಿವಶಂಕರ್‌, ಎಸಿ ಎಂ. ಶ್ರೀನಿವಾಸ್‌ ಸೇರಿದಂತೆ ಹಲವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next