Advertisement

ಸಮ್ಮಿಶ್ರ ಸರ್ಕಾರ ಉರುಳಿಸುವ ಷಡ್ಯಂತ್ರ: ಸಿಎಂ

11:29 PM Apr 16, 2019 | Team Udayavani |

ಮಂಡ್ಯ: “ಚುನಾವಣೆಯಲ್ಲಿ ನನ್ನ ಮಗ ನಿಖಿಲ್‌ನನ್ನು ಸೋಲಿಸಿ, ನನ್ನನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಕುತಂತ್ರ ನಡೆದಿದೆ’ ಎಂದು ಆರೋಪಿಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ತಮ್ಮ ಪುತ್ರನನ್ನು ಗೆಲ್ಲಿಸಿಕೊಡುವ ಮೂಲಕ ನನಗೆ ಶಕ್ತಿ ತುಂಬಬೇಕು ಎಂದು ಮನವಿ ಮಾಡಿದರು.

Advertisement

ಬಸರಾಳು ವ್ಯಾಪ್ತಿಯ ಗ್ರಾಮಗಳಲ್ಲಿ ಮಂಗಳವಾರ ರೋಡ್‌ ಶೋ ಮೂಲಕ ಜೆಡಿಎಸ್‌ ಅಭ್ಯರ್ಥಿ ನಿಖಿಲ್‌ ಪರ ಮತಯಾಚನೆ ನಡೆಸಿದ ಅವರು, ನಾನು ಮುಖ್ಯಮಂತ್ರಿ ಆಗಿರುವುದನ್ನು ಕೆಲವರು ಸಹಿಸುತ್ತಿಲ್ಲ. ಈ ಕಾರಣಕ್ಕೆ ನನ್ನ ಮಗನನ್ನು ಸೋಲಿಸಿ, ಸಮ್ಮಿಶ್ರ ಸರ್ಕಾರ ಉರುಳಿಸುವ ಷಡ್ಯಂತ್ರ ರೂಪಿಸಿದ್ದಾರೆ ಎಂದು ಆರೋಪಿಸಿದರು.

ವಿಧಾನಸಭೆ ಚುನಾವಣೆಯಲ್ಲಿ ಎಂಟಕ್ಕೆ ಎಂಟೂ ಸ್ಥಾನಗಳಲ್ಲಿ ಜೆಡಿಎಸ್‌ ಗೆಲ್ಲಿಸಿ, ನನಗೆ ಅಧಿಕಾರ ನೀಡಿದವರು ಮಂಡ್ಯದ ಮತದಾರರು. ಬಡವರು, ರೈತರ ಪರ ಯಾರು ಕೆಲಸ ಮಾಡುತ್ತಿದಾರೆ ಎನ್ನುವುದು ಎಲ್ಲರಿಗೂ ತಿಳಿದಿದೆ.

ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಈಗಾಗಲೇ 8700 ಕೋಟಿ ರೂ. ಅನುದಾನ ಮಂಜೂರಾಗಿದೆ. ಈ ಜಿಲ್ಲೆಯಲ್ಲಿ ಮುಂದಿನ ನನ್ನ ಅಭಿವೃದ್ಧಿ ಕೆಲಸಗಳಿಗೆ ಉತ್ತೇಜನ ನೀಡಲು ಜೆಡಿಎಸ್‌ ಅಭ್ಯರ್ಥಿ ನಿಖಿಲ್‌ ಅವರನ್ನು ಗೆಲ್ಲಿಸಬೇಕು ಎಂದು ಕುಮಾರಸ್ವಾಮಿ ಕರೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next