Advertisement

ರಾಜ್ಯಪಾಲರ ಆದೇಶವನ್ನೂ ಧಿಕ್ಕರಿಸ್ತಾರೆ, ಸಮ್ಮಿಶ್ರ ಸರ್ಕಾರಕ್ಕೆ ಬಹುಮತ ಇಲ್ಲ;BSY

09:23 AM Jul 21, 2019 | Nagendra Trasi |

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಬಹುಮತ ಕಳೆದುಕೊಂಡಿದೆ. ಆದರೂ ರಾಜ್ಯಪಾಲರ ನಿರ್ದೇಶನಕ್ಕೂ ಕ್ಯಾರೆ ಎನ್ನದೆ ಕಾಲಹರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಆರೋಪಿಸಿದ್ದಾರೆ.

Advertisement

ಶನಿವಾರ ಯಲಹಂಕ ಸಮೀಪದ ರಮಡ ರೆಸಾರ್ಟ್ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ಅದಕ್ಕೂ ಆದ್ಯತೆ ನೀಡುತ್ತಿಲ್ಲ. ನಾವು ಸೋಮವಾರ ಬಹುಮತ ಸಾಬೀತುಪಡಿಸುವಂತೆ ಒತ್ತಾಯಿಸುತ್ತೇವೆ ಎಂದರು.

ನಿಮಗೆ ಬಹುಮತ ಇಲ್ಲ, ನೈತಿಕತೆ ಇದ್ದರೆ ಬಹುಮತ ಸಾಬೀತುಪಡಿಸಿ ಎದ್ದು ಹೋಗಿ ಎಂದು ಬಿಎಸ್ ವೈ ಕಿಡಿಕಾರಿದರು.

ಸೋಮವಾರ ಬಹುಮತ ಸಾಬೀತು ಮುಂದೂಡಲು ಬಿಡಲ್ಲ, ಮೈತ್ರಿ ನಾಯಕರು ಸುಪ್ರೀಂಕೋರ್ಟ್ ನ ಭ್ರಮೆಯಲ್ಲಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ನಾಯಕರು ಕೋಟಿ, ಕೋಟಿ ಹಣದ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿದ ಸಾ.ರಾ.ಮಹೇಶ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಈ ಸಂದರ್ಭದಲ್ಲಿ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next