Advertisement
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಗೆ ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆಯಿದೆ. 2018ರ ಚುನಾವಣೆಯಲ್ಲಿ ಪಕ್ಷ ಪುನಃ ಅಧಿಕಾರಕ್ಕೆ ಬಂದ ನಂತರ ಸಿಎಂ ಅಭ್ಯರ್ಥಿಯನ್ನು ಹೈಕಮಾಂಡ್ ಆಯ್ಕೆ ಮಾಡುತ್ತದೆ. 2013ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಸಿಎಂ ಅಭ್ಯರ್ಥಿ ಎಂದು ಹೇಳಿದ ನಂತರ ಯಾರೊಬ್ಬರೂ ಸೊಲ್ಲೆತ್ತದೆ ಒಪ್ಪಿಕೊಂಡಿದ್ದೇವೆ. ಕಾಂಗ್ರೆಸ್ನಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಪುನರುಚ್ಚರಿಸಿದರು.
ಮಾಜಿ ಸಚಿವ ಕುಮಾರ್ ಬಂಗಾರಪ್ಪ ಕಾಂಗ್ರೆಸ್ ಬಗ್ಗೆ ಅಸಮಾಧಾನ ಹೊಂದಿರುವುದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಕುಮಾರ್ ಬಂಗಾರಪ್ಪ ಅವರ ತಂದೆಯವರ ಸ್ಥಾನ ತುಂಬುತ್ತಾರೆಂಬ ನಿರೀಕ್ಷೆಯಿತ್ತು. ಇದೇ ಕಾರಣಕ್ಕೆ ಮಂತ್ರಿ ಸ್ಥಾನವನ್ನೂ ನೀಡಲಾಗಿತ್ತು. ಅವರ ತಂದೆ ಹಾದಿ ತುಳಿದರೆ ಏನು ಮಾಡಬೇಕು? ಆದರೂ ಅವರೊಂದಿಗೆ ಮಾತುಕತೆ ನಡೆಸಲಾಗುವುದೆಂದು ಸ್ಪಷ್ಟಪಡಿಸಿದರು.