Advertisement

ಚುನಾವಣಾ ರ‍್ಯಾಲಿ ಬ್ಯಾನ್‌ನಿಂದ ಹಿಂದೆ ಸರಿಯುವುದೇ ಆಯೋಗ

12:14 PM Jan 15, 2022 | Team Udayavani |

ನವದೆಹಲಿ: ಕೋವಿಡ್ ಹರಡುವಿಕೆ ಹಿನ್ನೆಲೆಯಲ್ಲಿ ಚುನಾವಣಾ ಹೊಸ್ತಿಲಲ್ಲಿರುವ ಪಂಚರಾಜ್ಯಗಳಲ್ಲಿ ರ‍್ಯಾಲಿ, ಬೃಹತ್ ಸಮಾವೇಶಗಳನ್ನು ರದ್ದುಗೊಳಿಸಿದ್ದ ಕೇಂದ್ರ ಚುನಾವಣಾ ಆಯೋಗ ತನ್ನ ನಿರ್ಧಾರವನ್ನು ಪುನರ್ ಪರಾಮರ್ಶಿಸುವ ಸಾಧ್ಯತೆ ಇದೆ.

Advertisement

ಈ ಐದು ರಾಜ್ಯಗಳಲ್ಲಿ ಕೋವಿಡ್ ಹರಡುವಿಕೆ ಪ್ರಮಾಣ ಹಾಗೂ ನಿಯಂತ್ರಣ ಪರಿಸ್ಥಿತಿ ಹೇಗಿದೆ ಎಂಬ ಬಗ್ಗೆ ಮಾಹಿತಿ ಪಡೆಯುವುದಕ್ಕಾಗಿ ಆಯೋಗ ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಜತೆ ಸಭೆ ನಡೆಸಲಿದ್ದು ಆ ಬಳಿಕ ತನ್ನ ಹಿಂದಿನ  ನಿರ್ಣಯದಲ್ಲಿ ಕೊಂಚ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಇದೆ.

ಪಂಚರಾಜ್ಯಗಳಲ್ಲಿ ಚುನಾವಣೆ ಸಂದರ್ಭದಲ್ಲಿ ಯಾವುದೇ ರ‍್ಯಾಲಿ ಹಾಗೂ ಸಮಾವೇಶ ನಡೆಸಬಾರದೆಂದು ಆಯೋಗ ಐತಿಹಾಸಿಕ ನಿರ್ಣಯ ತೆಗೆದುಕೊಂಡಿತ್ತು. ಆದರೆ ಭಾರತದಲ್ಲಿ ಚುನಾವಣೆ ಎಂದರೆ ಹಬ್ಬದಂತೆ ಎಂದು ಕೆಲ ರಾಜಕೀಯ ಪಕ್ಷಗಳು ಖ್ಯಾತೆ ತೆಗೆದಿದ್ದವು.

ನಿರ್ಬಂಧದ ಮಧ್ಯೆಯೂ ಉತ್ತರ ಪ್ರದೇಶದಲ್ಲಿ ಶುಕ್ರವಾರ ಸಮಾಜವಾದಿ ಪಕ್ಷ ಬೃಹತ್ ಸಮಾವೇಶ ಆಯೋಜಿಸಿ ಆಯೋಗದ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಆಯೋಗ ಕೇಂದ್ರ ಆರೋಗ್ಯ ಇಲಾಖೆಯ ಜತೆ ಸಭೆ ನಡೆಸಲಿದೆ. ಜನವರಿ 15 ರ ನಂತರ ಈಗಿರುವ ನಿಯಮಾವಳಿಗಳಿಗೆ ಕೊಂಚ ರಿಯಾಯಿತಿ ಸಿಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next