Advertisement

ಬೆಳ್ಳಂದೂರು ಕೆರೆ ಸಮಸ್ಯೆ ಸ್ವಯಂಪ್ರೇರಿತ ದೂರು “ಲೋಕಾ’

12:25 PM Mar 01, 2017 | Team Udayavani |

ಬೆಂಗಳೂರು: ಬೆಳ್ಳಂದೂರು ಕೆರೆಯಲ್ಲಿ ರಾಸಾಯನಿಕ ನೊರೆಯಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆ ಆಧರಿಸಿ ಲೋಕಾಯುಕ್ತ ನ್ಯಾ. ಪಿ ವಿಶ್ವನಾಥ ಶೆಟ್ಟಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಕಳೆದ ಒಂದು ವರ್ಷದಿಂದ ಬೆಳ್ಳಂದೂರು ಕೆರೆಯಲ್ಲಿ ರಾಸಾಯನಿಕಯುಕ್ತ ನೊರೆ ಯಿಂದ ಸಾರ್ವಜನಿಕರಿಗೆ ತೊಂದರೆಯುಂಟಾಗುತ್ತಿದೆ.

Advertisement

ಈ ನಿಟ್ಟಿನಲ್ಲಿ ಸಮಸ್ಯೆ ಬಗೆಹರಿಸುವಂತೆ ಯಾವ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂಬುದರ ಕುರಿತು ಮುಂದಿನ ನಾಲ್ಕು ವಾರಗಳೊಳಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೆರೆ ಅಭಿವೃದ್ಧಿ ಪ್ರಾಧಿಕಾರ  ಹಾಗೂ ಬಿಡಿಎಗೆ ನೋಟೀಸ್‌ ನೀಡಲಾಗಿದೆ.

ಈ ಕುರಿತು ಉದಯವಾಣಿ ಜತೆ ಮಾತನಾಡಿದ ಲೋಕಾಯುಕ್ತ ನ್ಯಾ.ಪಿ ವಿಶ್ವನಾಥ ಶೆಟ್ಟಿ, ಬೆಳ್ಳಂದೂರು ಕೆರೆಯ ನೊರೆ ಸಮಸ್ಯೆಯ ಬಗ್ಗೆ  ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ವರದಿ ನೀಡುವಂತ ಕೋರಲಾಗಿದೆ.ಮೂರು ಸಂಸ್ಥೆYಗಳ ವರದಿ ಪರಿಶೀಲನೆ ಬಳಿಕ ಮುಂದಿನ ಕ್ರಮ ಬಗ್ಗೆ ಸರ್ಕಾರದ ಜತೆ ಸಮಾಲೋಚಿಸಲಾಗುವುದು. ಎಂದು ತಿಳಿಸಿದರು. ಅಲ್ಲದೆ ಬೆಂಗಳೂರಿನ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಮೂಲಸೌಕರ್ಯಗಳ ಕೊರತೆಯ ಬಗ್ಗೆಯೂ ಬಿಡಿಎಗೆ ನೋಟೀಸ್‌ ನೀಡಲಾಗಿದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next