Advertisement

ಪ್ರತ್ಯೇಕ ಧರ್ಮ ವಿಚಾರ ಮುಗಿದ ಅಧ್ಯಾಯ: ಶಾಮನೂರು

11:32 PM Apr 12, 2019 | Lakshmi GovindaRaju |

ಕಲಬುರಗಿ: ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರ ಮುಗಿದ ಅಧ್ಯಾಯ. ಲಿಂಗಾಯತ-ವೀರಶೈವ ಒಂದೇ. ವೀರಶೈವ-ಲಿಂಗಾಯತ ಜನರ ನಡುವೆ ಯಾವುದೇ ಭಿನ್ನಮತ ಇಲ್ಲ ಎಂದು ಅಖೀಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದರು.

Advertisement

ಶುಕ್ರವಾರ ಕಾಂಗ್ರೆಸ್‌ ಬೆಂಬಲಿತ ವೀರಶೈವ-ಲಿಂಗಾಯತ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮಿಬ್ಬರ ನಡುವೆ ಏನೂ ಇಲ್ಲ. ಆದರೆ ಸ್ವಾಮಿಗಳನ್ನು ರಾಜಕೀಯದಿಂದ ದೂರವಿಟ್ಟರೆ ಎಲ್ಲ ಸರಿ ಹೋಗುತ್ತದೆ ಎಂದರು.

ಚುನಾವಣೆ ನಂತರ ಸಮ್ಮಿಶ್ರ ಸರ್ಕಾರ ಪತನವಾಗುತ್ತದೆ ಎಂದಿರುವ ಯಡಿಯೂರಪ್ಪ ಹೇಳಿಕೆ ನಿರಾಧಾರ. ಆದರೆ ಯಡಿಯೂರಪ್ಪ ಅವರ ಸೀಟು ಹೋಗುತ್ತದೆ. ಯಡಿಯೂರಪ್ಪ ಸಿಎಂ ಆಗುತ್ತಾರೆಂದು ತಿಳಿದುಕೊಂಡು ಜನ ಬೆಂಬಲ ವ್ಯಕ್ತಪಡಿಸಿದ್ದರು. ಆದರೆ ಈ ಸಲ ಬೆಂಬಲ ಸಿಗುವುದಿಲ್ಲ. ಪ್ರಧಾನಿ ಮೋದಿ ರಾಜಕೀಯ ಪ್ರೇರಿತ ಐಟಿ ದಾಳಿ ನಡೆಸುತ್ತಿದ್ದಾರೆ. ಈ ಹಿಂದೆ ಯಾರ ಕಾಲದಲ್ಲೂ ಈ ರೀತಿ ನಡೆದಿರಲಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next