Advertisement

ಕಾಂಗ್ರೆಸ್, ಜೆಡಿಎಸ್ ಅಪವಿತ್ರ ಮೈತ್ರಿ ಹೆಚ್ಚು ದಿನ ಉಳಿಯಲ್ಲ; ಶೋಭಾ

06:33 PM May 19, 2018 | Sharanya Alva |

ಬೆಂಗಳೂರು: ನಾಯಿ, ನರಿಗಳಂತೆ ಕಚ್ಚಾಡುತ್ತಿದ್ದವರು ಈಗ ಒಂದಾಗಿದ್ದಾರೆ. ಕಾಂಗ್ರೆಸ್, ಜೆಡಿಎಸ್ ಅಪವಿತ್ರ ಮೈತ್ರಿ ಹೆಚ್ಚು ಉಳಿಯಲ್ಲ. ನಾಳೆಯಿಂದಲೇ ಅವರ ಕಚ್ಚಾ ಶುರುವಾಗುತ್ತದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಭವಿಷ್ಯ ನುಡಿದಿದ್ದಾರೆ.

Advertisement

ಶನಿವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯ, ರಾಷ್ಟ್ರರಾಜಕಾರಣದಲ್ಲಿ ತಪ್ಪು ಸಂದೇಶ ಹೋಗಬಾರದು ಎಂಬ ದೃಷ್ಟಿಯಲ್ಲಿ ಬಿಎಸ್ ಯಡಿಯೂರಪ್ಪನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವುದಾಗಿ ತಿಳಿಸಿದರು.

ಬಿಜೆಪಿ ಸಂವಿಧಾನ ಮತ್ತು ನ್ಯಾಯಾಂಗದ ಮೇಲೆ ಗೌರವ ಹೊಂದಿದೆ. ಜನ ಆಶೀರ್ವಾದ ಮಾಡಿದ್ದು ಬಿಜೆಪಿಗೆ, ಆದರೆ ಈಗ ಅಧಿಕಾರದ ದಾಹದಿಂದ ಕಾಂಗ್ರೆಸ್, ಜೆಡಿಎಸ್ ಒಂದಾಗಿವೆ ಎಂದು ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next