Advertisement

ಕಾಂಗ್ರೆಸ್‌ಗೆ ಈಗ ಭವಿಷ್ಯವಿಲ್ಲ

06:11 AM Jun 10, 2020 | Suhan S |

 ಧಾರವಾಡ: ಕಾಂಗ್ರೆಸ್‌ ಪಕ್ಷಕ್ಕೆ ರಾಜ್ಯ ಮತ್ತು ದೇಶದಲ್ಲಿ ಈಗಂತೂ ಭವಿಷ್ಯವಿಲ್ಲ ಎಂದು ಸಚಿವ ಜಗದೀಶ ಶೆಟ್ಟರ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ಪಕ್ಷಕ್ಕೆ ಭವಿಷ್ಯವಿಲ್ಲ ಎಂಬುದನ್ನು ಅರಿತೇ ಜನ ಮನೆಗೆ ಕಳುಹಿಸಿದ್ದಾರೆ. ರಾಹುಲ್‌ ಗಾಂಧಿಯಂಥ ನಾಯಕನ ಇಟ್ಟುಕೊಂಡು ಹೋಗುತ್ತಿರುವ ಕಾಂಗ್ರೆಸ್‌ಗೆ ಭವಿಷ್ಯ ಇಲ್ಲ. ಅದು ಅವರ ಹಣೆಬರಹ. ಏನೂ ಮಾಡಲಾಗದು. ಇದು ಅವರ ವಿವೇಚನೆಗೆ ಬಿಟ್ಟ ವಿಚಾರ ಎಂದು ರಾಜ್ಯದಲ್ಲಿ ಬಿಜೆಪಿಗೆ ಭವಿಷ್ಯವಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದರು.

Advertisement

ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗಿದ್ದು, ಅವರ ಪಕ್ಷಕ್ಕೆ ಒಬ್ಬರು ನಾಯಕರು ಬೇಕು. ಪಕ್ಷ ಕಟ್ಟಿ ಬೆಳೆಸುವುದು ಅವರಿಗೆ ಬಿಟ್ಟಿದ್ದು ಎಂದ ಸಚಿವರು, ಧಾರವಾಡ ಜಿಲ್ಲೆ ಹಾಗೂ ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಣದಲ್ಲಿದೆ. ವಲಸೆ ಕಾರ್ಮಿಕರು ಬಂದಿರುವ ಪರಿಣಾಮ ಕೆಲ ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾಗಿದೆ. ಮಹಾರಾಷ್ಟ್ರದಿಂದ ಬಂದವರಿಗೆ ಹೆಚ್ಚಾಗಿ ಪಾಸಿಟಿವ್‌ ಬಂದಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next