Advertisement

ಪ್ರಜಾಪ್ರಭುತ್ವದ ಆಶಯ ಗಾಳಿಗೆ ತೂರಿದ ಕಾಂಗ್ರೆಸ್‌; ಡಾ.ಕೆ. ಸುಧಾಕರ್‌

06:13 PM Jun 17, 2022 | Team Udayavani |

ಚಿಕ್ಕಬಳ್ಳಾಪುರ: ಸಂವಿಧಾನದ ಆಶಯಗಳನ್ನು ಕಾಂಗ್ರೆಸ್‌ ಮುಖಂಡರು ಗಾಳಿಗೆ ತೂರಿ ಬೀದಿಗಿಳಿದಿರುವುದು ವಿಪರ್ಯಾಸ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಕಿಡಿಕಾರಿದರು. ತಾಲೂಕಿನ ಕಮ್ಮಗುಟ್ಟಹಳ್ಳಿ, ಅಡ್ಡಗಲ್‌ ಗ್ರಾಪಂಗಳ ವ್ಯಾಪ್ತಿಯ ದರಬರು ಗ್ರಾಮದಲ್ಲಿ ಬಹುಗ್ರಾಮ ಘನತ್ಯಾಜ್ಯ ನಿರ್ವಹಣಾ ಘಟಕಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

Advertisement

ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡಲು ಎಲ್ಲರಿಗೂ ಅವಕಾಶವಿದೆ. ಆದರೆ ಯಾವ ವಿಷಯಕ್ಕೆ, ಯಾವ ಸಂದರ್ಭದಲ್ಲಿ ಮತ್ತು ಯಾಕೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂಬುದು ಮುಖ್ಯ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುವುದೇ ತಪ್ಪು ಎಂದರೆ ಹೇಗೆ? ಈ ಹಿಂದೆ ಪ್ರಧಾನಿ ಆಗಿದ್ದವರು ವಿಚಾರಣೆ ಎದುರಿಸಿದ್ದಾರೆ. ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ವಿಚಾರಣೆಗೆ ಹಾಜರಾಗಿದ್ದಾಗ ಇವರು ಎಲ್ಲಿ ಹೋಗಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾರ್ವಜನಿಕರಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಲು ಹೆ„ಕೋರ್ಟ್‌ ಅವಕಾಶ ನೀಡಿದೆ. ಆದರೂ, ಕಾಂಗ್ರೆಸ್ಸಿಗರು ವಿತಂಡವಾದ ಮಾಡಿ ಪ್ರತಿಭಟನೆ ಮಾಡುತ್ತಿರುವುದು ಸರಿಯಲ್ಲ ಎಂದರು.

ರಾಜ್ಯದ ಜನರ ಆರೋಗ್ಯದ ಜವಾಬ್ದಾರಿ ನನ್ನದು: ಆರೋಗ್ಯ ಸಚಿವನಾಗಿ ಜನತೆ ಆರೋಗ್ಯ ಕಾಪಾಡುವುದು ನನ್ನ ಕರ್ತವ್ಯ ಹಾಗಾಗಿ ಇದು ಪ್ರತಿಭಟಿಸುವ ಸಮಯವಲ್ಲ. ಕೋವಿಡ್‌ ಹೆಚ್ಚಳ ಆದಲ್ಲಿ ಅದಕ್ಕೆ ಪ್ರತಿಭಟನೆ ಕಾರಣ ಆಗುತ್ತದೆ ಎಂದು ಹೇಳಿದ್ದೇನೆ. ಅದನ್ನು ಸರಿಯಿಲ್ಲ ಎಂದರೆ ಏನು ಹೇಳಬೇಕು. ಎರಡನೇ ಅಲೆಯಲ್ಲಿ ಕೋವಿಡ್‌ ತೀವ್ರವಾದಾಗ ಸರ್ಕಾರವನ್ನು ಟೀಕಿಸಿದ ಇವರು, ಮುಂದಿನ ದಿನಗಳಲ್ಲಿ ಸಮಸ್ಯೆಯಾದರೆ ಯಾರು ಹೊಣೆ ಹೊರುತ್ತಾರೆ? ಸಿದ್ದರಾಮಯ್ಯ, ಬಿ.ಕೆ. ಹರಿ ಪ್ರಸಾದ್ ,ಡಿ.ಕೆ. ಶಿವಕುಮಾರ್‌ ಜವಾಬ್ದಾರರಲ್ಲ, ಡಾ. ಸುಧಾಕರ್‌ ಮತ್ತು ಬಸವರಾಜ ಬೊಮ್ಮಾಯಿ ಜವಾಬ್ದಾರರಾಗಬೇಕು ಹಾಗಾಗಿಯೇ ಹೇಳಿದ್ದೇನೆ ಎಂದು ಸಮರ್ಥಿಸಿಕೊಂಡರು.

ಪ್ರತಿಭಟನೆಗಳಿಂದ ತನಿಖಾ ಸಂಸ್ಥೆಯವರು ವಿಚಾರಣೆಗೆ ಕರೆಯಬಾರದು ಎಂದು ಒತ್ತಡ ಹೇರಲು ಪ್ರತಿಭಟನೆ ಮಾಡುತ್ತಿದ್ದಾರೆ.ಪ್ರತಿಭಟನೆಯನ್ನು ಜನ ಗಮನಿಸುತ್ತಿದ್ದಾರೆ ಎಂದರು.

Advertisement

ಜನರಿಗೆ ತೊಂದರೆ ಕೊಟ್ಟು ಮಾಡುವ ಸಾಧನೆಯೇನು?
ದೇಶದಲ್ಲಿ ಕೋವಿಡ್‌ ಪ್ರಕರಣಗಳು ಏರಿಕೆಯಾಗುತ್ತಿದೆ ಇಂತಹ ಸಂದರ್ಭದಲ್ಲಿ ಬೀದಿ ಬೀದಿಯಲ್ಲಿ ಪ್ರತಿಭಟನೆ ಮಾಡಿ, ಸಂಚಾರಕ್ಕೆ ಅಡಚಣೆ ಮಾಡಿ, ಜನರಿಗೆ ತೊಂದರೆ ಕೊಟ್ಟು ಏನು ಸಾಧನೆ ಮಾಡಲು ಹೊರಟಿದ್ದಾರೆ. ಕಾನೂನು ಒಬ್ಬರಿಗೊಂದು, ಮತ್ತೂಬ್ಬರಿಗೆ ಇನ್ನೊಂದು ಇರಬೇಕಾ, ಸಮಾನತೆ ಬಗ್ಗೆ, ಸಾಮಾಜಿಕ ನ್ಯಾಯ, ಸಂವಿಧಾನದ ಬಗ್ಗೆ ಉಪದೇಶ ನೀಡುವ ಇವರು ಇದ್ಯಾವುದಕ್ಕೂ ಬೆಲೆ ಕೊಡದಿದ್ದರೆ ಸರ್ಕಾರಗಳು ಏನು ಮಾಡಬೇಕು ಎಂದು ಆರೋಗ್ಯ ಸಚಿವ ಕೆ. ಸುಧಾಕರ್‌ ಪ್ರಶ್ನಿಸಿದರು.

ಪ್ರತಿಭಟನೆ ನಡೆಸುತ್ತಿರುವ ನಾಯಕರೇ ಆತ್ಮವಿಮರ್ಶೆ ಮಾಡಿಕೊಳ್ಳಲಿ, ದೆಹಲಿಯಿಂದ ಬೆಂಗಳೂರಿನವರೆಗೂ ಅವರು ನಡೆಸಿರುವ ಪ್ರಹಸನವನ್ನು ರಾಜ್ಯದ ಜನರು ಗಮನಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನರೇ ಅವರ ತೀರ್ಮಾನ ನೀಡುತ್ತಾರೆ.
● ಡಾ. ಕೆ. ಸುಧಾಕರ್‌, ಆರೋಗ್ಯ ಸಚಿವ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next