Advertisement

ಕಣ್ವ ಮಠಾಧೀಶರನ್ನು ಪೀಠದಿಂದ ಇಳಿಸಲು ಒಮ್ಮತದ ನಿರ್ಣಯ

11:09 PM Sep 20, 2019 | Lakshmi GovindaRaju |

ಸುರಪುರ: ಯಾದಗಿರಿ ಜಿಲ್ಲೆಯ ಹುಣಸಗಿ ಸಮೀಪದ ಹುಣಸಿಹೊಳೆ ಕಣ್ವ ಮಠಾಧೀಶ ವಿದ್ಯಾವಾರಿಧಿ ತೀರ್ಥ ಯತಿಗಳನ್ನು ಪೀಠದಿಂದ ಕೆಳಗಿಳಿಸಲು ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ಸ್ವಾಮೀಜಿ ಯವರು ಮೈಸೂರು ಮೂಲದ ಯುವತಿಯೊಂದಿಗೆ ಅಶ್ಲೀಲವಾಗಿ ಸಂಭಾಷಣೆ ನಡೆಸಿದ್ದಾರೆ ಎನ್ನಲಾದ ಆಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿ ವಿವಾದಕ್ಕೆ ಕಾರಣ ವಾಗಿತ್ತು. ಈ ಹಿನ್ನೆಲೆಯಲ್ಲಿ ಅಖೀಲ ಭಾರತ ಕಣ್ವ ಶಾಖಾ ವಿಪ್ರ ಸಮಾಜ ಬಾಂಧವರು ನಗರದ ದರ್ಬಾರ್‌ನಲ್ಲಿ ಅರಸು ಮನೆತನದ ರಾಜಾ ಕೃಷ್ಣಪ್ಪ ನಾಯಕ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಭೆ ಸೇರಿ ಈ ನಿರ್ಣಯ ಕೈಗೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next