Advertisement

ವಾಮಂಜೂರು-ಪಿಲಿಕುಳ ಚತುಷ್ಪಥ ರಸ್ತೆಗೆ ಶಿಲಾನ್ಯಾಸ

10:37 AM Dec 22, 2017 | |

ಪಿಲಿಕುಳ: ಕರಾವಳಿ ಅಭಿ ವೃದ್ಧಿ ಪ್ರಾಧಿಕಾರದಿಂದ ಮಂಗಳೂರು ತಾಲೂಕಿನ ವಾಮಂಜೂರು ಜಂಕ್ಷನ್‌ನಿಂದ ಪಿಲಿಕುಳ ನಿಸರ್ಗಧಾಮದ ಮುಖ್ಯದ್ವಾರದವರೆಗಿನ ಚತುಷ್ಪಥ ಕಾಂಕ್ರೀಟ್‌ ರಸ್ತೆ ನಿರ್ಮಾಣ ಕಾಮಗಾರಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎಂ.ಆರ್‌.ಸೀತಾರಾಂ ಅವರು ಗುರುವಾರ ಶಿಲಾನ್ಯಾಸ ನೆರವೇರಿಸಿದರು.

Advertisement

ಕರಾವಳಿಯ ಪ್ರವಾಸೋದ್ಯಮಕ್ಕೆ ಪಿಲಿಕುಳ ನಿಸರ್ಗಧಾಮ ಬಹುದೊಡ್ಡ ಕೊಡುಗೆಯಾಗಿ ಗುರುತಿಸಿಕೊಂಡಿದೆ. ರಾಜ್ಯದ ಮೂಲೆ ಮೂಲೆಯಿಂದ ಪ್ರವಾಸಿಗರು ಭೇಟಿ ನೀಡುತ್ತಿದ್ದು, ಇಲ್ಲಿನ ಮೂಲಸೌಕರ್ಯಗಳನ್ನು ಮೇಲ್ದರ್ಜೆಗೇರಿಸಲು ವಿವಿಧ ರೀತಿಯಲ್ಲಿ ಉದ್ದೇಶಿಸ ಲಾಗಿದೆ. ಜತೆಗೆ ಪಿಲಿಕುಳದಲ್ಲಿ ದೇಶದ ಮೊದಲ ತಾರಾಲಯ ನಿರ್ಮಾಣವೂ ಆಗಲಿದ್ದು, ಇದು ಪ್ರವಾಸೋದ್ಯಮ ಅಭಿವೃದ್ಧಿಗೆ ಇನ್ನಷ್ಟು ಉತ್ತೇಜನ ದೊರಕಿಸಿಕೊಡಲಿದೆ ಎಂದು ಸಚಿವರು ಹೇಳಿದರು.

ಶಾಸಕ ಮೊದಿನ್‌ ಬಾವಾ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಶಾಸಕ ಜೆ.ಆರ್‌.ಲೋಬೋ, ಮೇಯರ್‌ ಕವಿತಾ ಸನಿಲ್‌, ಪಾಲಿಕೆ ಮುಖ್ಯ ಸಚೇತಕ ಎಂ.ಶಶಿಧರ ಹೆಗ್ಡೆ, ಕೆಎಸ್‌ಆರ್‌ಟಿಸಿ ನಿರ್ದೇಶಕ ಟಿ.ಕೆ. ಸುಧೀರ್‌ ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next