Advertisement

ಶಿವರಾಜ್‌ಕುಮಾರ್‌ ದಂಪತಿ ನ್ಯಾಯಾಲಯಕ್ಕೆ ಹಾಜರು

09:53 AM Feb 26, 2017 | Team Udayavani |

ಶಿವಮೊಗ್ಗ: ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರನಟ ಶಿವರಾಜ್‌ ಕುಮಾರ್‌, ಗೀತಾ ಶಿವರಾಜ್‌ ಕುಮಾರ್‌ ಹಾಗೂ ಶಾಸಕ ಮಧು ಬಂಗಾರಪ್ಪ ಶನಿವಾರ ಇಲ್ಲಿನ ಮೂರನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.

Advertisement

ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಇರುವ ವೇಳೆಯಲ್ಲಿ ಅವಧಿ ಮೀರಿ ಪ್ರಚಾರ ನಡೆಸಿದ್ದರು. ಇದರಿಂದಾಗಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ನಟ ಶಿವರಾಜ್‌ ಕುಮಾರ್‌ ಸೇರಿ ನಾಲ್ವರ ವಿರುದ್ಧ ದೂರು ದಾಖಲಾಗಿತ್ತು.

ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ನೋಟಿಸ್‌ ನೀಡಿದ್ದರೂ ಶಿವರಾಜ್‌ ಕುಮಾರ್‌ ದಂಪತಿ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ವಾರೆಂಟ್‌ ಹೊರಡಿಸಲು ಕೋರ್ಟ್‌ ಸೂಚಿಸಿದ್ದರಿಂದ ಶನಿವಾರ ವಿಚಾರಣೆಗೆ ಹಾಜರಾದರು. ಮಾ. 1 ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.

ಕೋರ್ಟ್‌ ಸೂಚನೆಯಂತೆ ಹಾಜರು: ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, ಕೋರ್ಟ್‌ ಸೂಚನೆಯಂತೆ ವಿಚಾರಣೆಗೆ ಹಾಜರಾಗಿದ್ದೇವೆ ಎಂದು ನಟ ಶಿವರಾಜ್‌ ಕುಮಾರ್‌ ತಿಳಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next