Advertisement

ರಾಜ್ಯದಲ್ಲಿ ಕೋವಿಡ್ ಮಹಾಸ್ಪೋಟ : ಇಂದು 14738 ಪ್ರಕರಣಗಳು

07:16 PM Apr 15, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಸ್ಫೋಟವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 14738 ಜನರಿಗೆ ಮಹಾಮಾರಿ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.

Advertisement

ಇಂದು ಸಂಜೆ ಕರ್ನಾಟಕ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ, ಕಳೆದ 24 ಗಂಟೆಗಳ ಕಾಲಾವಧಿಯಲ್ಲಿ (ದಿನಾಂಕ 13.04.2021 ರ 00:00 ರಿಂದ 23:59 ರವರೆಗೆ) ಪತ್ತೆಯಾಗಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ 14738  ಈ ಮೂಲಕ  ಒಟ್ಟು ಸೋಂಕಿತರ ಸಂಖ್ಯೆ 1109650 ಕ್ಕೆ ಏರಿಕೆಯಾಗಿದೆ.

ಇದೇ ಅವಧಿಯಲ್ಲಿ ರಾಜ್ಯದಲ್ಲಿ ಇಂದು 3591 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 999958 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 96561 ಸಕ್ರಿಯ ಪ್ರಕರಣಗಳಿದ್ದು, 506 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವತ್ತು 66 ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 13112ಕ್ಕೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು 10497 ಜನರಿಗೆ ಕೋವಿಡ್ ಸೋಂಕು ತಗುಲಿದೆ. ಇವತ್ತು ಒಂದೇ ದಿನ 30 ಜನ ಸೋಂಕಿತರು ಮೃತಪಟ್ಟಿದ್ದು, 71827 ಸಕ್ರಿಯ ಪ್ರಕರಣಗಳಿವೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next