Advertisement
ಚಾಮರಾಜಪೇಟೆಯ ಸಂಘ ಪರಿವಾರದ ಕೇಂದ್ರ ಕಚೇರಿಯಲ್ಲಿ ನಡೆಯಲಿರುವ ಈ ಸಭೆ ಇಡೀ ದಿನ ಮುಂದುವರೆಯಲಿದ್ದು, ವಿವಿಧ ಸಂಘಟನೆಗಳ ಪ್ರಮುಖ ಮುಖಂಡರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಲಾಗುತ್ತದೆ. ಬಿಜೆಪಿಯೂ ಒಂದು ಅಂಗ ಸಂಸ್ಥೆಯಾಗಿರುವುದರಿಂದ ಅದರ ಮುಖಂಡರೂ ಭಾಗಿಯಾಗಲಿದ್ದಾರೆ. ಯಡಿಯೂರಪ್ಪಮತ್ತು ಈಶ್ವರಪ್ಪ ಅವರೂ ಇದೇ ಸಭೆಯಲ್ಲಿ ುುಖಾಮುಖೀಯಾಗಲಿದ್ದಾರೆ.
ಗಂಭೀರ ಹಂತಕ್ಕೆ ತಲುಪಿದೆ. ಇದರ ನಡುವೆಯೇ ಪಕ್ಷದ 24 ಮುಖಂಡರು ಯಡಿಯೂರಪ್ಪ ಅವರ ಕಾರ್ಯವೈಖರಿಗೆ
ಅಸಮಾಧಾನ ವ್ಯಕ್ತಪಡಿಸಿ ಅವರಿಗೆ ನೇರವಾಗಿ ಪತ್ರ ಬರೆದಿರುವುದು ಸಾಕಷ್ಟು ಗೊಂದಲಕ್ಕೆ ಕಾರಣವಾಗಿದೆ. ಇದು ಪಕ್ಷದ ಪ್ರತಿಷ್ಠೆಗೆ ಧಕ್ಕೆ ಉಂಟಾಗಬಹುದು ಎಂಬ ಮಾತು ಪಕ್ಷದ ಮುಖಂಡರಿಂದಲೇ ಕೇಳಿಬರುತ್ತಿದೆ. ಹೀಗಾಗಿ ಮಂಗಳವಾರದ ಸಭೆಯಲ್ಲಿ ಈ ಬಗ್ಗೆ ಕೂಡ ಚರ್ಚೆಗೆ ಬರಬಹುದು ಎಂಬ ನಿರೀಕ್ಷೆಯಿದೆ. ಆದರೆ, ಸಾಮಾನ್ಯವಾಗಿ ಇಂಥ ಸಮನ್ವಯ ಸಭೆಗಳಲ್ಲಿ ನಿರ್ದಿಷ್ಟ ವಿಚಾರದ ಬಗ್ಗೆ ಪ್ರಸ್ತಾಪಕ್ಕೆ ಅವಕಾಶವಿರುವುದಿಲ್ಲ. ಪಕ್ಷದ ಸಂಘಟನೆ ಮತ್ತು ಮುಂದಿನ ಕಾರ್ಯಕ್ರಮಗಳ ಬಗ್ಗೆ ರೂಪುರೇಷೆ ಸಿದ್ಧಪಡಿಸುವ ಕುರಿತು ಸಮಾಲೋಚನೆ ನಡೆಸುವ ಸಾಧ್ಯತೆಯೇ ಹೆಚ್ಚು ಎಂದು ಮೂಲಗಳು ಸಮಜಾಯಿಷಿ ನೀಡಿವೆ. ಹೀಗಾಗಿ, ಮಂಗಳವಾರ ಸಭೆ ಮುಗಿದ ನಂತರವೇ ಈ ಬಗ್ಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ.