Advertisement

Subramanya ನಾಪತ್ತೆಯಾಗಿದ್ದ ಯುವಕನ ಮೃತದೇಹ ಹೊಳೆಯಲ್ಲಿ ಪತ್ತೆ

12:25 AM Aug 08, 2024 | Team Udayavani |

ಸುಬ್ರಹ್ಮಣ್ಯ: ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಳ್ಪದ ಯುವಕನ ಮೃತದೇಹ ಬುಧವಾರ ಪಂಜದ ಹೊಳೆಯಲ್ಲಿ ಪತ್ತೆಯಾಗಿದೆ.

Advertisement

ಕಡಬ ತಾಲೂಕಿನ ಬಳ್ಪ ಗ್ರಾಮದ ಅಕ್ಕೇಣಿಯ ಅಶೋಕ್‌ (33) ಮೃತರು. ಅಶೋಕ್‌ ಆ. 4ರಂದು ಮನೆಯಿಂದ ನಾಪತ್ತೆಯಾಗಿದ್ದರು. ಅವರಿಗಾಗಿ ಮೂರು ದಿನಗಳಿಂದ ತೀವ್ರ ಹುಡುಕಾಟ ನಡೆಸಲಾಗಿತ್ತು, ಹೊಳೆಗೆ ಬಿದ್ದಿರುವ ಶಂಕೆ ಹಿನ್ನೆಲೆಯಲ್ಲಿ ಪಂಜ ಹೊಳೆಯಲ್ಲಿ ಹುಡುಕಾಟ ನಡೆಸುತ್ತಿದ್ದ ವೇಳೆ ಪಲ್ಲೋಡಿ ಅಡ್ಕ ಎನ್ನುವಲ್ಲಿ ಯುವಕನ ಮೃತದೇಹ ಬುಧವಾರ ಪತ್ತೆಯಾಗಿದೆ.

ಕಾರ್ಯಾಚರಣೆಯಲ್ಲಿ ಸುಳ್ಯದ ಮುಳುಗು ತಜ್ಞರ ತಂಡ ಸಂಪಾಜೆ ಶೌರ್ಯ ವಿಪತ್ತು ನಿರ್ವಹಣ ಘಟಕದ ಸದಸ್ಯರಾದ ಪ್ರಗತಿ ಆ್ಯಂಬ್ಯುಲೆನ್ಸ್‌ನ ಅಬ್ದುಲ್‌ ರಜಾಕ್‌ (ಅಚ್ಚು), ಚಿದಾನಂದ ಗೂನಡ್ಕ, ಮುತ್ತಪ್ಪನ್‌ ಆ್ಯಂಬ್ಯುಲೆನ್ಸ್‌ನ ಅಭಿ ಸುಳ್ಯ ಮತ್ತಿತರರು ಪಾಲ್ಗೊಂಡಿದ್ದರು. ಸುಬ್ರಹ್ಮಣ್ಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next