Advertisement

Ullal ರಿಕ್ಷಾ ಟೆಂಪೋ ಚಾಲಕನ ಮೃತದೇಹ ಪತ್ತೆ

12:32 AM Sep 28, 2023 | Team Udayavani |

ಉಳ್ಳಾಲ: ತೊಕ್ಕೊಟ್ಟು ಒಳಪೇಟೆಯ ಸಂತ ಸೆಬೆಸ್ತಿಯನ್ನರ ಚರ್ಚ್‌ ಬಳಿಯ ಮನೆಯ ಬಾವಿ ಯಲ್ಲಿ ರಿಕ್ಷಾ ಟೆಂಪೋ ಚಾಲಕರೊಬ್ಬರ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆ ಎಂದು ಶಂಕಿಸಲಾಗಿದೆ.

Advertisement

ತೊಕ್ಕೊಟ್ಟು, ಕೃಷ್ಣ ನಗರ, ಲಚ್ಚಿಲ್‌ ನಿವಾಸಿ ನಾಗೇಶ್‌ (62)ಆತ್ಮಹತ್ಯೆಗೈದ ರಿಕ್ಷಾ ಟೆಂಪೊ ಚಾಲಕ. ನಾಗೇಶ್‌ ಅವರು ಒಳಪೇಟೆಯ ಚರ್ಚ್‌ ಮುಂಭಾಗದ ಮನೆಯಂಗಳದಲ್ಲಿ ದಿನನಿತ್ಯ ರಿಕ್ಷಾ ಟೆಂಪೋ ಪಾರ್ಕ್‌ ಮಾಡುತ್ತಿದ್ದರು. ಬುಧವಾರ ಬೆಳಗ್ಗೆ ನಾಗೇಶ್‌ ಅವರು ಟೆಂಪೋ ತೆಗೆಯದೆ ನಾಪತ್ತೆಯಾಗಿದ್ದು ಸಂಪರ್ಕಕ್ಕೆ ಸಿಕ್ಕಿರಲಿಲ್ಲ.

ಟೆಂಪೋದಲ್ಲಿ ನಾಗೇಶ್‌ ಅವರ ಮೊಬೈಲ್‌, ನಗದು, ಫೋಟೊ, ಚಪ್ಪಲಿ ದೊರಕಿದ್ದು ಅನುಮಾನಗೊಂಡ ಮನೆ ಮಂದಿ, ಸ್ಥಳೀಯರು ಬಾವಿಯಲ್ಲಿ ಹುಡುಕಾಟ ನಡೆಸಿದಾಗ ಶವ ಇರುವುದು ತಿಳಿಯಿತು. ಆಬಳಿಕ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬಂದಿ ಬಾವಿಯಿಂದ ಮೃತ ದೇಹವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟರು.

ಸಾಮಾಜಿಕ, ಧಾರ್ಮಿಕವಾಗಿ ತೊಡಗಿಸಿಕೊಂಡಿದ್ದ ನಾಗೇಶ್‌ ತೊಕ್ಕೊಟ್ಟು ನಿತ್ಯಾನಂದ ಯುವಕ ಮಂಡಲದ ಮಾಜಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ನಾಗೇಶ್‌ ಅವರು ಹೃದಯ ಸಂಬಂಧಿ ಕಾಯಿಲೆ ಯಿಂದ ಬಳಲುತ್ತಿದ್ದರು. ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next