Advertisement

ನ್ಯೂಸ್‌ ವೆಬ್‌ಸೈಟ್‌ ಮಾಲೀಕ ಶಂಕಾಸ್ಪದ ಸಾವು

11:55 PM Jan 01, 2020 | Team Udayavani |

ಉಡುಪಿ: ಮಂಗಳೂರು ನ್ಯೂಸ್‌ ವೆಬ್‌ಸೈಟ್‌ ನಡೆಸುತ್ತಿದ್ದ ಮಂಗಳೂರು ಮೂಲದ ರೋಹಿತ್‌ ರಾಜ್‌ ಶೆಟ್ಟಿ (56) ಅವರು ಮಣಿಪಾಲದ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ, ಈ ಸಾವಿನಲ್ಲಿ ಸಂಶಯವಿದೆ ಎಂದು ಮೃತರ ತಂದೆ ನೀಡಿರುವ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

ಇವರು ಮಂಗಳವಾರ ರಾತ್ರಿ ಹೊಸವರ್ಷದ ಪಾರ್ಟಿ ನಡೆಸಿದ್ದು, ಬಳಿಕ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಮಲಗಿದ್ದರು ಎಂದು ಹೇಳಲಾಗುತ್ತಿದೆ. ಮೇಲ್ನೋಟಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಂತೆ ಕಂಡು ಬಂದಿದೆಯಾದರೂ, ಅವರ ತಂದೆ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಅದರ ವರದಿ ಬಂದ ಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next