Advertisement

ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಯುವಕ ಸಾವು

10:52 AM Oct 14, 2019 | sudhir |

ಶಿವಮೊಗ್ಗ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ನೀರಿಗೆ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ಸಾಗರ ತಾಲೂಕಿನ ಹೊಸಕೊಪ್ಪ ಗ್ರಾಮದಲ್ಲಿ ರವಿವಾರ ಸಂಭವಿಸಿದೆ.

Advertisement

ಗೌತಮ್(21) ನೀರಿಗೆ ಬಿದ್ದು ಮೃತಪಟ್ಟ ಯುವಕ. ಗೌತಮಪುರ ಗ್ರಾ.ಪಂ ಅಧ್ಯಕ್ಷೆ ಗೀತಾ- ರೇವಪ್ಪ ದಂಪತಿಗಳ ಮಗನಾದ ಗೌತಮ್ ಗ್ರಾಮದ ಗುಮ್ಮನಹಳ್ಳಿ ಕೆರೆಗೆ ಮಧ್ಯಾಹ್ನ ಗೆಳೆಯರೊಂದಿಗೆ ಮೀನು ಹಿಡಿಯಲು ಹೋಗಿದ್ದ ಗೌತಮ್ ಆಯತಪ್ಪಿ ಕೆರೆಗೆ ಬಿದ್ದಿದ್ದಾನೆ.

ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಶವವನ್ನು ಮೇಲಕೆತ್ತಿದ್ದಾರೆ.

ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next