Advertisement

ನಿರ್ಧಾರ ಬಿಸಿಸಿಐಗೆ ಬಿಟ್ಟದ್ದು: ಕೇಂದ್ರ ಸಚಿವ ರವಿಶಂಕರ್‌ ಪ್ರಸಾದ್‌

12:30 AM Feb 21, 2019 | Team Udayavani |

ಹೊಸದಿಲ್ಲಿ: ವಿಶ್ವಕಪ್‌ನಲ್ಲಿ ಭಾರತ ತಂಡ ಪಾಕಿಸ್ಥಾನದ ವಿರುದ್ಧ ಆಡಬಾರದು ಎಂಬ ಆಗ್ರಹಕ್ಕೆ ಸಂಬಂಧಪಟ್ಟಂತೆ ಕೇಂದ್ರ ಕಾನೂನು ಸಚಿವ ರವಿಶಂಕರ್‌ ಪ್ರಸಾದ್‌ ಜಾಣ್ಮೆಯಿಂದ ಪ್ರತಿಕ್ರಿಯಿಸಿದ್ದಾರೆ. 

Advertisement

ಪರಿಸ್ಥಿತಿ ಹದಗೆಟ್ಟಿರುವುದರಿಂದ ಜನರ ಬೇಡಿಕೆಯಲ್ಲೂ ಒಂದು ನ್ಯಾಯವಿದೆ. ಆದರೆ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಬಿಸಿಸಿಐ ಮತ್ತು ಐಸಿಸಿಗೆ ಸಂಬಂಧಿಸಿದ್ದು ಎಂದಿದ್ದಾರೆ. ಇನ್ನೊಂದು ಕಡೆ ಬಿಸಿಸಿಐ, ಕೇಂದ್ರ ಸರಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ತಾನು ಬದ್ಧ ಎಂದು ಹೇಳಿಕೊಂಡಿದೆ.

“ಭಾರತ-ಪಾಕಿಸ್ಥಾನ ಸಿನಿಮಾ, ಔದ್ಯಮಿಕ ಸಂಬಂಧ ಕಡಿದುಕೊಳ್ಳುವಾಗ ಕ್ರೀಡೆಯನ್ನೂ ಪರಿಗಣಿಸಬೇಕಾಗುತ್ತದೆ. ಇದರ ಹೊರತು ಬೇರೇನನ್ನೂ ನಾನು ಹೇಳಲು ಬಯಸುವುದಿಲ್ಲ. ವಿಶ್ವಕಪ್‌ ಒಂದು ಅಂತಾರಾಷ್ಟ್ರೀಯ ಕೂಟವಾಗಿರುವುದರಿಂದ, ಬಿಸಿಸಿಐ-ಐಸಿಸಿ ಸೇರಿ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ’ ಎಂದು ರವಿಶಂಕರ್‌ ಪ್ರಸಾದ್‌ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next