Advertisement
ಪ್ರತಿ ವರ್ಷ ಮಳೆಗಾಲದಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಹತ್ತಾರು ಮರಗಳು ಧರೆಗುರುಳಿ, ಸಂಚಾರ ದಟ್ಟಣೆ ಉಂಟಾಗುತ್ತದೆ. ಜತೆಗೆ ಧಾರಾಕಾರ ಮಳೆಯ ಪರಿಣಾಮ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನರು ತೊಂದರೆ ಅನುಭವಿಸುವಂತಾಗುತ್ತದೆ. ಕೆಲವೊಮ್ಮೆ ಮನೆಗಳು ಜಲಾವೃತಗೊಂಡು ಪ್ರಾಣಾಪಾಯ ಸಂಭವಿಸುವ ಸಾಧ್ಯತೆಯೂ ಇರುತ್ತದೆ.
Related Articles
Advertisement
ವಾಹನಗಳ ಲಭ್ಯತೆ: ಅರಣ್ಯ ವಿಭಾಗದಲ್ಲಿ ರಕ್ಷಣಾ ಕಾರ್ಯಾಚರಣೆಗೆ ವಾಹನಗಳ ಕೊರತೆಯಿರುವುದರಿಂದ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದರೆ, ವಲಯ ಮಟ್ಟದಲ್ಲಿ ಹಲವಾರು ವಾಹನಗಳು ಲಭ್ಯವಿರುವುದರಿಂದ ಸಿಬ್ಬಂದಿ ಶೀಘ್ರ ಸಮಸ್ಯೆಗಳಿಗೆ ಸ್ಪಂದಿಸಲು ಧಾವಿಸಬಹುದು. ಇದರೊಂದಿಗೆ ತಂಡಗಳು ಎಲ್ಲಿ ಕಾರ್ಯಾಚರಣೆ ನಡೆಸುತ್ತಿವೆ ಎಂಬುದರ ಕುರಿತು ಮುಖ್ಯ ಎಂಜಿನಿಯರ್ ಮೇಲ್ವಿಚಾರಣೆ ನಡೆಸಬಹುದಾಗಿದೆ ಅರಣ್ಯ ವಿಭಾಗದ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದ್ದಾರೆ.
ಪಾಲಿಕೆಯಿಂದ ಮುನ್ನೆಚ್ಚರಿಕೆ ಕ್ರಮಗಳು: ಪಾಲಿಕೆಯಿಂದ ಈಗಾಗಲೇ ನಗರದಲ್ಲಿ ಮಳೆಯಿಂದ ಉಂಟಾಗುವ ಸ್ಥಳಗಳನ್ನು ಗುರುತಿಸಲಾಗಿದೆ. ಜತೆಗೆ ಸಾರ್ವಜನಿಕರು ಹಾಗೂ ಪಾಲಿಕೆ ಸದಸ್ಯರ ಸಹಕಾರದೊಂದಿಗೆ ದುರ್ಬಲಗೊಂಡಿರು ಹಾಗೂ ಶಿಥಿಲಾವಸ್ಥೆಯಲ್ಲಿರುವ ಮರಗಳನ್ನು ತೆರವುಗೊಳಿಸಲು ಕ್ರಮಕೈಗೊಳ್ಳಲಾಗಿದೆ. ಜತೆಗೆ ಒಣಗಿದ ಕೊಂಬೆಗಳ ತೆರವುಗೊಳಿಸುವ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಮಳೆಗಾಲದಲ್ಲಿ ನಗರದ ಜನತೆಯ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಿ ಪರಿಹಾರ ಕಲ್ಪಿಸುವ ಉದ್ದೇಶದಿಂದ ಅರಣ್ಯ ವಿಭಾಗದಲ್ಲಿರುವ 21 ರಕ್ಷಣಾ ತಂಡಗಳನ್ನು ರಚಿಸಿ, ಪ್ರತಿಯೊಂದು ವಲಯಕ್ಕೂ 2ರಿಂದ 3 ತಂಡಗಳನ್ನು ನಿಯೋಜಿಸಲು ಉದ್ದೇಶಿಸಲಾಗಿದೆ. ಈ ಕುರಿತು ಎಂಟು ವಲಯಗಳ ಮುಖ್ಯ ಎಂಜಿನಿಯರ್ಗಳೊಂದಿಗೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗಿದೆ. -ಚೋಳರಾಜಪ್ಪ, ಉಪ ಅರಣ್ಯ ಸಂರಕ್ಷಣಾಧಿಕಾರಿ, ಬಿಬಿಎಂಪಿ * ವೆಂ.ಸುನೀಲ್ ಕುಮಾರ್