Advertisement

ಗಣ್ಯರ ವಿರುದ್ಧ ಅವಹೇಳನಕಾರಿ ಪೋಸ್ಟ್‌: ಕ್ರಮಕ್ಕೆ ಮನವಿ

05:37 AM May 29, 2020 | Lakshmi GovindaRaj |

ಬೆಂಗಳೂರು: ಪ್ರಧಾನ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಇತರೆ ಸಚಿವರ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕುತ್ತಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು  ಸಂಬಂಧಪಟ್ಟವರಿಗೆ ಸೂಚಿಸುವಂತೆ ಸಚಿವ ಸಿ.ಟಿ. ರವಿ ಅವರು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ.

Advertisement

ಕಾಂಗ್ರೆಸ್‌ ಪಕ್ಷದ ವಾಟ್ಸಾಪ್‌ ಗ್ರೂಪ್‌ವೊಂದರಲ್ಲಿ ಪ್ರಧಾನಿಯವರಿಗೆ ಅವಮಾನ  ಮಾಡುವ ರೀತಿಯ ಚಿತ್ರ, ಮಾಹಿತಿ ಹಂಚಿಕೊಂಡಿರುವುದು ಗಮನಕ್ಕೆ ಬಂದಿದೆ. ಈ ವಾಟ್ಸಾಪ್‌ ಗ್ರೂಪ್‌ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಸಿ.ಟಿ. ರವಿ ಕೋರಿದ್ದಾರೆ. ನಾನು ಇದ್ದ ವಾಹನ ಅಪಘಾತವಾದಾಗಲೇ ಪ್ರತಿಕ್ರಿಯೆ ನೀಡಿದ್ದೆ.  ಆದರೂ ಪದೇ ಪದೇ ನನ್ನ ಹೆಸರು, ಛಾಯಾಚಿತ್ರ ದುರ್ಬಳಕೆ ಮಾಡಲಾಗುತ್ತಿದೆ. ಟೀಕೆಯಲ್ಲಿ ಕೆಟ್ಟ ಶಬಟಛಿಗಳಿರಬಾರದು. ಕಾಂಗ್ರೆಸ್‌ ನಾಯಕರು ಸಹ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು. ನಾನು ಗೃಹ ಸಚಿವರಿಗೆ ದೂರು ನೀಡುತ್ತೇನೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next