Advertisement

ಜಿಲ್ಲಾ ಜೆಡಿಎಸ್‌ನಲ್ಲಿ ಭುಗಿಲೆದ್ದ ಭಿನ್ನಮತ

11:44 PM Apr 02, 2019 | Team Udayavani |

ಶಿವಮೊಗ್ಗ: ಮೈತ್ರಿ ಪಕ್ಷಗಳು ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ಸಚಿವ ಡಿ.ಕೆ. ಶಿವಕುಮಾರ್‌ ಎಚ್ಚರಿಕೆ ನೀಡಿದ ಎರಡು ದಿನಗಳಲ್ಲೇ ಜಿಲ್ಲಾ ಜೆಡಿಎಸ್‌ನಲ್ಲಿ ಭಿನ್ನಮತ ಭುಗಿಲೆದ್ದಿದೆ. ತೀರ್ಥಹಳ್ಳಿ ತಾಲೂಕು ಜೆಡಿಎಸ್‌ ಘಟಕದ ಅಧ್ಯಕ್ಷರಾದ ಆರ್‌. ಮದನ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಆರ್‌. ಎಂ. ಮಂಜುನಾಥ ಗೌಡರ ಜೊತೆಗಿನ ಭಿನ್ನಾಭಿಪ್ರಾಯದಿಂದ ಮನನೊಂದು ಪಕ್ಷದ
ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಸುದ್ದಿ
ಗೋಷ್ಠಿ ಯಲ್ಲಿ ಮಾತನಾಡಿದ ಮದನ್‌, ತೀರ್ಥಹಳ್ಳಿ ತಾಲೂಕು ಜೆಡಿಎಸ್‌ ಘಟಕದಲ್ಲಿ ಇತ್ತೀಚಿನ ಬೆಳವಣಿಯಲ್ಲಿ ತಮ್ಮನ್ನು ವ್ಯವಸ್ಥಿತವಾಗಿ ಮೂಲೆಗುಂಪಾ ಗಿಸುವ ಪ್ರಯತ್ನ ನಡೆಯುತ್ತಿದೆ. ಇದರಿಂದ ಮನನೊಂದು ಈ ನಿರ್ಧಾರ ತೆಗೆದುಕೊಂಡು ರಾಜೀನಾಮೆ ಪತ್ರವನ್ನು ರಾಷ್ಟ್ರೀಯ ಅಧ್ಯಕ್ಷ  ಎಚ್‌.ಡಿ. ದೇವೇಗೌಡ ಅವರಿಗೆ ಕಳಿಸಿದ್ದೇನೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next