Advertisement

ಜಿಲ್ಲಾ ಜನರ ಸಮಸ್ಯೆಗಳಿಗೆ ಸ್ಪಂದಿಸುವೆ 

07:35 AM Mar 22, 2019 | Team Udayavani |

ಶ್ರೀರಂಗಪಟ್ಟಣ: ರಾಜಕೀಯ ಅನುಭವ ಇಲ್ಲದಿದ್ದರೂ ಜನರ ಆರ್ಶೀವಾದದಿಂದ ಮಂಡ್ಯ ಜಿಲ್ಲೆಗಾಗಿ ಶ್ರಮಿಸುತ್ತೇನೆ ಎಂದು ಲೋಕಸಭಾ ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಹೇಳಿದರು. 

Advertisement

ತಾಲೂಕಿನ ಪಂಪ್‌ಹೌಸ್‌ ಬಳಿಯ ಕೃಷ್ಣ ಕನ್ವೆಷನ್‌ ಹಾಲ್‌ನಲ್ಲಿ  ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಬೆಳಗೊಳ ಹೋಬಳಿ ಮಟ್ಟದ ಜೆಡಿಎಸ್‌ ಕಾರ್ಯಕರ್ತರ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ತಾತ ದೇವೇಗೌಡರು ಹಾಗೂ ತಂದೆ ಕುಮಾರಸ್ವಾಮಿ ಅವರಿಂದ ರಾಜಕೀಯ ಅನುಭವ ಪಡೆಯುತ್ತಿದ್ದೇನೆ.

ಜೊತೆಗೆ ಜನರ ಕಷ್ಟಗಳಲ್ಲಿ ನಾನು ಈಗಾಗಲೇ ಭಾಗಿಯಾಗುತ್ತಿದ್ದೇನೆ. ಮಂಡ್ಯ ಜಿಲ್ಲೆಯ ಜನರ ಪ್ರೀತಿ ಆಶೀರ್ವಾದಗಳೇ ನನ್ನ ರಾಜಕೀಯ ಏಳಿಗೆಗೆ ಪೂರಕವಾಗಿದ್ದು, ಜನರ ವಿಶ್ವಾಸ ಗಳಿಸಲು ಜಿಲ್ಲೆಯ ಎಲ್ಲಾ ಭಾಗಗಳಿಗೂ ತೆರಳುತ್ತಿದ್ದೇನೆ. ಅವರ ಪ್ರೀತಿ ವಿಶ್ವಾಸದಿಂದ ಋಣ ತೀರಿಸಲು ಈ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ ಎಂದು ಹೇಳಿದರು.
 
ಶಾಸಕ ರವೀಂದ್ರ ಶ್ರೀಕಂಠಯ್ಯ ಮಾತನಾಡಿ, ಶ್ರೀರಂಗಪಟ್ಟಣ ಸೇರಿದಂತೆ ಜಿಲ್ಲೆಯಲ್ಲಿ ಅಪಾರವಾಗಿ ಅಭಿವೃದ್ಧಿಗೊಳಿಸಲು ಮುಖ್ಯಮಂತ್ರಿಗಳು ಸಹಕಾರ ನೀಡುತ್ತಿದ್ದಾರೆ. ಇಲ್ಲಿನ ಜನರ ಅಭಿಪ್ರಾಯದಂತೆ ಇಲ್ಲಿನ ಅಭಿವೃದ್ಧಿ ಕೆಲಸಗಳು ನಡೆಯುತ್ತಿದೆ. ಅವರ ಬೆಂಬಲಕ್ಕೆ ನಾವೂ ಕೈಜೋಡಿಸುವ ಕೆಲಸ ಮಾಡಬೇಕಿದೆ. ಕ್ಷೇತ್ರದಲ್ಲಿನ ಮತದಾರರು ನಿಖಿಲ್‌ ಕುಮಾರಸ್ವಾಮಿ ಅವರನ್ನು ಬೆಂಬಲಿಸಿ ಚುನಾವಣೆಯಲ್ಲಿ ಜಯ ಗಳಿಸಲು ಸಹಕರಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಜೆಡಿಎಸ್‌ ತಾಲೂಕು ಅಧ್ಯಕ್ಷ ಪೈ.ಮುಕುಂದ, ಜಿಪಂ ಸದಸ್ಯೆ ಸವಿತಾ, ತಾಪಂ ಅಧ್ಯಕ್ಷೆ ಮಂಜುಳಾ, ತಾಪಂ ಸದಸ್ಯರಾದ ಸರಸ್ವತಿ, ಕೋಮಲಾ, ಮುಖಂಡರಾದ ಬಿ.ಎಂ.ಸ್ವಾಮಿಗೌಡ, ಸಾಮಿಲ್‌ ಸ್ವಾಮಣ್ಣ, ಸಂತೋಷ್‌ ಸೇರಿದಂತೆ ಬೆಳಗೊಳ ಹೋಬಳಿಯ ಗ್ರಾಪಂ ಅಧ್ಯಕ್ಷರು, ಸದಸ್ಯರು ಸೇರಿದಂತೆ ಜೆಡಿಎಸ್‌  ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next