Advertisement

ದೋಸ್ತಿ ಸರ್ಕಾರ ಪತನಕ್ಕೆ ಸಿದ್ದು ಕಾರಣರಲ್ಲ: ದತ್ತ

12:45 AM Jul 28, 2019 | Team Udayavani |
ಸಾಗರ: ಪರಸ್ಪರ ಸಂಪರ್ಕದ ಕೊರತೆಯಿಂದ ಸಮ್ಮಿಶ್ರ ಸರ್ಕಾರ ಪತನಗೊಂಡಿದೆ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿಯವರು ಕಾಲಕಾಲಕ್ಕೆ ಶಾಸಕರನ್ನು ಭೇಟಿ ಮಾಡಿ ಅವರ ಸಮಸ್ಯೆ ಆಲಿಸದೆ ಇರುವುದೂ ಕಾರಣವೇ ವಿನಃ ಸಿದ್ದರಾಮಯ್ಯ ಶೇ.100ರಷ್ಟು ಕಾರಣರಲ್ಲ ಎಂದು ಮಾಜಿ ಶಾಸಕ ವೈ.ಎಸ್‌.ವಿ.ದತ್ತ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಸದನದಲ್ಲಿ ಸಿದ್ದರಾಮಯ್ಯನವರು ತಮ್ಮ ಆಪ್ತವರ್ಗದಲ್ಲಿ ಗುರುತಿಸಿ ಕೊಂಡಿದ್ದ ಶಾಸಕರು ಮುಂಬೈಗೆ ಹೋದಾಗ ಕಡ್ಡಿ ತುಂಡು ಮಾಡಿದಂತೆ ಅವರನ್ನು ಪುನಃ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ ಎಂದು ತಿಳಿಸಿದರು. ಬಿಜೆಪಿ ಜನರಿಗೆ ಸುಭದ್ರ ಮತ್ತು ಸ್ಥಿರ ಸರ್ಕಾರ ನೀಡಲಿದೆ. ಜನರ ಸಮಸ್ಯೆಗೆ ಸ್ಪಂದಿಸುತ್ತದೆ ಎನ್ನುವ ನಿರೀಕ್ಷೆ ಇಲ್ಲ. ಜೆಡಿಎಸ್‌ ಸೇರಿ ಯಾವ ಪಕ್ಷದಲ್ಲೂ ಆಂತರಿಕ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿ ಉಳಿದಿಲ್ಲ ಎಂದು ಹೇಳಿದರು

Advertisement
Advertisement

Udayavani is now on Telegram. Click here to join our channel and stay updated with the latest news.

Next