Advertisement

ಒಳಚರಂಡಿ ಕಾಮಗಾರಿ ಅಪೂರ್ಣ: ಕಾನೂನು ಕ್ರಮಕ್ಕೆ ಆಗ್ರಹ

02:52 PM May 06, 2022 | Team Udayavani |

ಹುಮನಾಬಾದ: ಪಟ್ಟಣದಲ್ಲಿ 28 ಕೋಟಿ ರೂ. ವೆಚ್ಚದಲ್ಲಿ ಕೈಗೊಂಡ ಯುಜಿಡಿ (ಒಳ ಚರಂಡಿ) ಕಾಮಗಾರಿ ಇಂದಿಗೂ ಅಪೂರ್ಣವಿದ್ದು, ಈ ಕುರಿತು ತಪ್ಪಿಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಬೇಕು ಎಂದು ಪುರಸಭೆ ಸಾಮಾನ್ಯ ಸಭೆಯಲ್ಲಿ ಸರ್ವ ಸದಸ್ಯರು ಸರ್ವಾನುಮತದಿಂದ ಆಗ್ರಹಿಸಿದರು.

Advertisement

ಪಟ್ಟಣದ ಪುರಸಭೆ ಸಭಾಗಣದಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಪುರಸಭೆ ಸದಸ್ಯರಾದ ರಮೇಶ ಕಲ್ಲೂರ್‌, ಅನಿಲ ಪಲ್ಲರಿ, ಎಸ್‌.ಎ ಬಾಸಿದ್‌, ಅಪ್ಸರ್‌ ಮಿಯ್ನಾ, ರಾಜರೆಡ್ಡಿ, ಅಬ್ದುಲ್‌ ಗೋರೆಮಿಯ್ನಾ, ವೀರೇಶ ಸೀಗಿ ಸೇರಿದಂತೆ ಇತರೆ ಸದಸ್ಯರು, ಅಪೂರ್ಣ ಕಾಮಗಾರಿಯನ್ನು ಪೂರ್ಣಗೊಂಡಿದೆ ಎಂದು ಈ ಹಿಂದಿನ ಪುರಸಭೆ ಅಧಿಕಾರಿ ಕಾಮಗಾರಿ ಹಸ್ತಾಂತರ ಪತ್ರಕ್ಕೆ ಸಹಿ ಹಾಕಿದ್ದಾರೆ. ಅಲ್ಲದೆ, ಜಿಲ್ಲಾಧಿಕಾರಿಗಳಿಗೆ ಬೆಂಗಳೂರಿನ ಕಚೇರಿಗೆ ಹಸ್ತಾಂತರ ಮಾಡಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ.

29 ಕೋಟಿ ರೂ. ಅನುದಾನದ ಕಾಮಗಾರಿ ಜನರ ಉಪಯೋಗಕ್ಕೆ ಬರಬೇಕು ಎಂದು ಒತ್ತಾಯಿಸಿದರು. ಈ ಕುರಿತು ಸಭೆಯ ನಡುವಳಿಯನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರುವುದಾಗಿ ಮುಖ್ಯಾಧಿಕಾರಿ ಶೇಖ್‌ ಚಾಂದ್‌ ಪಟೇಲ್‌ ಹೇಳಿದರು.

ವಿವಿಧ ಚರ್ಚೆಗಳು: ಉದ್ಯಾನವನದಲ್ಲಿ ನಿರ್ಮಿಸಿರುವ ಪುರಭವನ ಕಟ್ಟಡ ಹಸ್ತಾಂತರ ಕುರಿತು ಸಂಬಂಧಿಸಿದ ಇಲಾಖೆಗೆ ಪತ್ರ ಬರೆಯಬೇಕು. ಪೂರ್ಣ ಕಾಮಗಾರಿ ಮಾಡಿ ಪರಿಶೀಲನೆ ನಡೆಸಿ ಕಟ್ಟಡ ಹಸ್ತಾಂತರ ಮಾಡಿಕೊಳ್ಳಬೇಕು ಎಂದು ಸಭೆಯಲ್ಲಿ ಸದಸ್ಯರು ಹೇಳಿದರು.

ಧುಮ್ಮನಸೂರ ವಲಯದಲ್ಲಿನ ಪುರಸಭೆ ಭೂಮಿಯಲ್ಲಿ ನಿವೇಶನ ಅಳವಡಿಸಿ ಮನೆ ಇಲ್ಲದವರಿಗೆ ಹಂಚಿಕೆ ಮಾಡಬೇಕು ಎಂದು ಅಭಿಪ್ರಾಯ ವ್ಯಕ್ತವಾಯಿತು. ಪಟ್ಟಣದ ಅಭಿವೃದ್ಧಿಗಾಗಿ ಹೊಸ ಲೇಔಟ್‌ಗಳ ಅನುಮೋದನೆ ನೀಡಬೇಕು. ಉದ್ಯಾನವನ ಪ್ರದೇಶದಲ್ಲಿನ ನಿವೇಶನಕ್ಕೆ ಆನ್‌ ಲೈನ್‌ ಖಾತೆ ರದ್ದು ಮಾಡಬೇಕು ಎಂದು ಸಭೆಯಲ್ಲಿ ಚರ್ಚೆಗಳು ನಡೆದವು. ಅಲ್ಲದೆ, 15ನೇ ಹಣಕಾಸು ಯೋಜನೆಯ 2.15 ಕೋಟಿ, ಎಸ್‌. ಎಫ್‌.ಸಿ ಯೋಜನೆಯಡಿ 86 ಲಕ್ಷ ರೂ. ಅನುದಾನ ಕುರಿತು ಹೊಸ ಕೆಲಸಗಳ ಕುರಿತು ಚರ್ಚೆ ನಡೆಸಿದರು.

Advertisement

92 ಹುದ್ದೆ ಖಾಲಿ: ಪುರಸಭೆಯಲ್ಲಿ ಒಟ್ಟಾರೆ 134 ಹುದ್ದೆಗಳು ಹೊಂದಿದ್ದು, ಈ ಪೈಕಿ 42 ಹುದ್ದೆಗಳು ಮಾತ್ರ ಭರ್ತಿ ಇವೆ. 92 ಹುದ್ದೆಗಳು ಖಾಲಿ ಇರುವ ಕಾರಣ ವಿವಿಧ ಕೆಲಸ ಕಾರ್ಯಕ್ಕೆ ಸಮಸ್ಯೆ ಉಂಟಾಗುತ್ತಿದೆ ಎಂದು ಪುರಸಭೆ ಮುಖ್ಯಾಧಿಕಾರಿ ತಿಳಿಸಿದರು.

ಇದಕ್ಕೆ ಪುರಸಭೆ ಸದಸ್ಯ ಸುನೀಲ ಪಾಟೀಲ ಮಾತನಾಡಿ, ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಪುರಸಭೆಯ ಸರ್ವ ಸದಸ್ಯರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವರಿಕೆ ಮಾಡಬೇಕು. ಕೂಡಲೇ ಖಾಲಿ ಹುದ್ದೆಗಳ ಅವಶ್ಯಕತೆ ಹೆಚ್ಚಿರುವ ಕಾರಣ ಸರ್ಕಾರಕ್ಕೆ ಪ್ರಾಸ್ತಾವನೆ ಸಲ್ಲಿಸುವಂತೆ ಮನವಿ ಮಾಡಬೇಕು ಎಂದು ತಿಳಿಸಿದರು. ಇದಕ್ಕೆ ಸರ್ವ ಸದಸ್ಯರು ಕೂಡ ಧ್ವನಿಗೂಡಿಸಿದರು. ಕೂಡಲೇ ಜಿಲ್ಲಾಧಿಕಾರಿಗಳ ಬಳಿಗೆ ನಿಯೋಗ ತೆರಳಿ ಮನವಿ ಸಲ್ಲಿಸೋಣ ಎಂದು ತೀರ್ಮಾನಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next