Advertisement

Road Mishap: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಇಬ್ಬರ ಸ್ಥಿತಿ ಗಂಭೀರ!

10:57 PM Jun 26, 2024 | Shreeram Nayak |

ತೀರ್ಥಹಳ್ಳಿ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆಯಲ್ಲಿ ಪಲ್ಟಿಯಾದ ಘಟನೆ ಮಾಸ್ತಿ ಕಟ್ಟೆ ಸಮೀಪ ಶಂಕರ್ ಮನೆ ಎಂಬಲ್ಲಿ ಬುಧವಾರ ಸಂಭವಿಸಿದೆ.

Advertisement

ಯಡೂರು ಸಮೀಪ ಮತ್ತಿಗ ಬಳಿ ಮೀನು ಹಿಡಿಯಲು ಹೋಗಿ ವಾಪಾಸ್ ತೀರ್ಥಹಳ್ಳಿಗೆ ಬರುವಾಗ ಈ ಘಟನೆ ನಡೆದಿದೆ.

ಪಟ್ಟಣದ ಸಮೀಪದ ಕೌರಿಬೈಲು ,ಹೆಗ್ಗೆಬೈಲು ಹಾಗೂ ಸಿಬಿನಕೆರೆಯ ಐವರು ಯುವಕರು ಮೀನು ಹಿಡಿಯಲು ಕಾರಿನಲ್ಲಿ ಹೋಗಿದ್ದರು. ವಾಪಾಸ್ ಬರುವಾಗ ಕಾರು ಪಲ್ಟಿಯಾಗಿದೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು ಗಾಯಗೊಂಡ ಮೂವರನ್ನು ಪಟ್ಟಣದ ಸರ್ಕಾರಿ ಜೆಸಿ ಆಸ್ಪತ್ರೆಗೆ ಹಾಗೂ ಇಬ್ಬರನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇಬ್ಬರ ಸ್ಥಿತಿ ಗಂಭೀರವಾಗಿದ್ದು ಅದರಲ್ಲಿ ಒಬ್ಬನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next