Advertisement

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

06:14 PM May 21, 2024 | Team Udayavani |

ಕೋಲ್ಕತ್ತಾ: ಕೋಲ್ಕತ್ತಾ ಹೈಕೋರ್ಟ್ ನ ಮಾಜಿ ಜಡ್ಜ್, ಬಿಜೆಪಿ ಲೋಕಸಭಾ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ ಅವರಿಗೆ 24 ಗಂಟೆಗಳ ಕಾಲ ಚುನಾವಣಾ ಪ್ರಚಾರ ನಡೆಸದಂತೆ ಕೇಂದ್ರ ಚುನಾವಣಾ ಆಯೋಗ ತಡೆ ನೀಡಿದೆ. ಈ ತಿಂಗಳ ಆರಂಭದಲ್ಲಿ ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ದ ಮಾಡಿದ್ದ ಅವಹೇಳನಕಾರಿ ಟೀಕೆಗಳ ಬಳಿಕ ಆಯೋಗದ ಈ ನಡೆ ಬಂದಿದೆ.

Advertisement

ಇಸಿಐ ಆದೇಶದ ಪ್ರಕಾರ, ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಜಿಲ್ಲೆಯ ತಮ್ಲುಕ್ ಲೋಕಸಭಾ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಅಭಿಜಿತ್ ಗಂಗೋಪಾಧ್ಯಾಯ ಅವರನ್ನು ಮಂಗಳವಾರ ಸಂಜೆ 5 ಗಂಟೆಯಿಂದ ಬುಧವಾರ ಸಂಜೆ 5 ಗಂಟೆಯವರೆಗೆ ಪ್ರಚಾರ ಮಾಡದಂತೆ ನಿರ್ಬಂಧಿಸಲಾಗಿದೆ.

ಮೇ 15 ರಂದು ಹಲ್ದಿಯಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಅಭಿಜಿತ್ ಗಂಗೋಪಾಧ್ಯಾಯ ಅವರು ಬಂಗಾಳಿ ಭಾಷೆಯಲ್ಲಿ ಭಾಷಣದ ವೇಳೆ, “ಮಮತಾ ಬ್ಯಾನರ್ಜಿ, ನೀವು ಎಷ್ಟಕ್ಕೆ ಮಾರಾಟವಾಗಿದ್ದೀರಿ? ನಿಮ್ಮ ದರ 10 ಲಕ್ಷ ರೂಪಾಯಿಗಳು ಏಕೆ? ಏಕೆಂದರೆ ಕೀಯಾ ಸೇಠ್ ಅವರು ನಿಮ್ಮ ಮೇಕಪ್ ಮಾಡುತ್ತಿದ್ದಾರೆಯೇ? ಮಮತಾ ಬ್ಯಾನರ್ಜಿ ನೀವೂ ಒಂದು ಮಹಿಳೆಯೇ…” ಎಂದು ಹೇಳಿದ್ದರು.

ಈ ಬಗ್ಗೆ ತೃಣಮೂಲ ಕಾಂಗ್ರೆಸ್ ಆಯೋಗಕ್ಕೆ ದೂರು ನೀಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next