Advertisement

ಚುನಾವಣಾ ಆಯೋಗ ಕೇಂದ್ರದ ಕೈಗೊಂಬೆ ಆಗಿದೆ : ದಿನೇಶ್ ಗುಂಡೂರಾವ್

03:35 PM Sep 30, 2019 | Suhan S |

ಬೆಂಗಳೂರು : ಕೇಂದ್ರ ಚುನಾವಣಾ ಆಯೋಗ ತೆಗೆದುಕೊಳ್ಳುತ್ತಿರುವ ತೀರ್ಮಾನಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ದೂರು ಸಲ್ಲಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.

Advertisement

ಸೋಮವಾರ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ದೇಶದ ಇತಿಹಾಸದಲ್ಲಿ ಈ ರೀತಿ ನಡೆದುಕೊಂಡಿರಲಿಲ್ಲ. ಸುಪ್ರೀಂ ಕೋರ್ಟ್ ನಲ್ಲಿ ಅವರು ಕೇಳದೆ ಹೇಳಿಕೆ ನೋಡುತ್ತಾರೆ. ಅನರ್ಹರ ಪರ ಇವರೇ ವಕಾಲತ್ತು ವಹಿಸುತ್ತಾರೆ ಎಂದು ಹೇಳಿದರು.

ಆಯೋಗ ಸಂವಿಧಾನಿಕ ಸಂಸ್ಥೆ, ಅವರು ದಿನಕ್ಕೊಂದು ಹೇಳಿಕೆ ನೋಡಿದರೆ ಹೇಗೆ ಇವರಿಗೆ ಯಾರು ಆದೇಶ ಮಾಡುತ್ತಿದ್ದಾರೆ. ಕೇಂದ್ರದ ಚುನಾವಣಾ ಆಯೋಗ ಬಿಜೆಪಿ ಆದೇಶದಂತೆ ನಡೆದುಕೊಳ್ಳುತ್ತಿದೆ ಎಂದರು.

ಚುನಾವಣೆ ಘೋಷಣೆ ಆದ ದಿನದಿಂದಲೇ ನೀತಿ ಸಂಹಿತೆ ಜಾರಿಯಾಗುತ್ತದೆ. ಆದರೆ , ಇವರು ಈಗ ಚುನಾವಣೆ ಘೋಷಣೆ ಮಾಡಿ   ನವೆಂಬರ್ 11 ರಿಂದ ನೀತಿ ಸಂಹಿತೆ ಜಾರಿಗೊಳಿಸಿದೆ. ಈ ಮೂಲಕ ಅನರ್ಹ ಶಾಸಕರ ಕ್ಷೇತ್ರಗಳಿಗೆ ಬೇಕಾ ಬಿಟ್ಟಿ ಯೋಜನೆ ಜಾರಿಗೊಳಿಸಲು ಇವರೇ ಅವಕಾಶ ಕಲ್ಪಿಸಿ ಕೊಟ್ಟಿದ್ದಾರೆ. ಸರ್ಕಾರಿ ವ್ಯವಸ್ಥೆ ದುರುಪಯೋಗ ಮಾಡಿಕೊಳ್ಳಲು ಅವಕಾಶ ಮಾಡಿಕೊಡುತ್ತಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next