Advertisement

ರಾಘವೇಶ್ವರ ಶ್ರೀಗಳ ಪುರಪ್ರವೇಶ

12:48 AM Jul 16, 2019 | Team Udayavani |

ಬೆಂಗಳೂರು: ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮಿಗಳ ಚಾತುರ್ಮಾಸ್ಯ ಜು.16ರಿಂದ ಆರಂಭವಾಗುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನ ಪುರಪ್ರವೇಶ ಅದ್ಧೂರಿಯಾಗಿ ನೆರವೇರಿತು.

Advertisement

ಹವ್ಯಕ ಮಹಾಮಂಡಲ ಅಧ್ಯಕ್ಷೆ ಈಶ್ವರಿ ಭಟ್‌ ಬೇರ್ಕಡವು, ಚಾತುರ್ಮಾಸ್ಯ ಕ್ರಿಯಾಸಮಿತಿ ಅಧ್ಯಕ್ಷ ರಮೇಶ್‌ ಹೆಗಡೆ ಕೋರಮಂಗಲ, ಕಾರ್ಯದರ್ಶಿ ವಾದಿರಾಜ ಸಾಮಗ, ರಾಮಾಯಣ ಕ್ರಿಯಾಸಮಿತಿ ಅಧ್ಯಕ್ಷ ಶಾರದಾ ಜಯಗೋವಿಂದ್‌, ಕೆಕ್ಕಾì ರಾಮಚಂದ್ರ ಭಟ್‌ ಹಾಗೂ ಶ್ರೀಮಠದ ಶಿಷ್ಯರು, ಭಕ್ತರು ಈ ಸಂದರ್ಭದಲ್ಲಿ ಹಾಜರಿದ್ದು ಪುರಪ್ರವೇಶ ಮಾಡಿದ ಶ್ರೀಗಳನ್ನು ಭಕ್ತಿಪೂರ್ವಕವಾಗಿ ಬರಮಾಡಿಕೊಂಡರು.

ಮಂಗಳವಾರ ಚಾತುರ್ಮಾಸ್ಯ ವ್ರತಾರಂಭದ ಅಂಗವಾಗಿ ಬೆಳಗ್ಗೆ ಶ್ರೀಕರಾರ್ಚಿತ ಪೂಜೆಯ ಬಳಿಕ ಶ್ರೀವ್ಯಾಸ ಪೂಜೆ ಮತ್ತು ಗುರು ಪರಂಪರೆಯ ವಿಶೇಷ ಪೂಜೆ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಅನ್ನರಾಶಿ ಪೂಜೆ, ಪುನರ್ವಸು ಲೋಕಾರ್ಪಣೆ, ಮಧ್ಯಾಹ್ನ 2 ಗಂಟೆಗೆ ಚಾತುರ್ಮಾಸ್ಯ ಸಭೆ ಮತ್ತು ನೂತನ ಶಾಸನ ತಂತ್ರದ ಘೋಷಣೆ ನಡೆಯಲಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next