Advertisement

ಮೈತ್ರಿ ಸರಕಾರ ಪತನಕ್ಕೆ ಸಿದ್ದು-ಎಚ್‌ಡಿಕೆ ಕಾರಣ: ವಿಶ್ವನಾಥ್‌

10:01 AM Sep 27, 2019 | sudhir |

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಚ್‌.ಡಿ.ಕುಮಾರಸ್ವಾಮಿ ಅವರು ಮೈತ್ರಿ ಸರಕಾರವನ್ನು ಪತನಗೊಳಿಸಿದ ಮಹಾನುಭಾವರು. ಇದರಲ್ಲಿ ಅವರಿಬ್ಬರದೂ 50:50ರಷ್ಟು ಸಮಪಾಲು ಇದೆ ಎಂದು ಅನರ್ಹಗೊಂಡ ಶಾಸಕ ಎಚ್‌.ವಿಶ್ವನಾಥ್‌ ಹೇಳಿದರು.

Advertisement

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಡಾಲರ್ ಕಾಲನಿ ನಿವಾಸದಲ್ಲಿ ಗುರುವಾರ ಭೇಟಿಯಾಗಿ ಚರ್ಚಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹದ್ದು- ಗಿಣಿ ವಾಕ್ಸಮರದ ಮೂಲಕ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಅವರು ತಾವೇ ಮೈತ್ರಿ ಸರಕಾರವನ್ನು ಪತನಗೊಳಿಸಿದವರು ಎಂದು ಸಾರಿ ಹೇಳುತ್ತಿದ್ದಾರೆ. ಅವರ ಮಾತುಗಳು, ಆರೋಪ- ಪ್ರತ್ಯಾರೋಪಗಳೇ ಸಮ್ಮಿಶ್ರ ಸರಕಾರಕ್ಕೆ ಇದಕ್ಕೆ ಅತ್ಯುತ್ತಮ ಸಾಕ್ಷ್ಯಗಳೆನಿಸಿವೆ ಎಂದು ಮಾರ್ಮಿಕವಾಗಿ ನುಡಿದರು.

ಯಡಿಯೂರಪ್ಪ ಅವರನ್ನು ಭೇಟಿಯಾದ ಕುರಿತು ಪ್ರತಿಕ್ರಿಯಿಸಿದ ಎಚ್‌.ವಿಶ್ವನಾಥ್‌, ಕ್ಷೇತ್ರದ ಕೆಲಸವಿದ್ದ ಕಾರಣ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಹಣ ಬಿಡುಗಡೆಗೆ ಮನವಿ ಮಾಡಲಾಗಿದೆಯೇ ಹೊರತು ಯಾವುದೇ ಆತಂಕದಿಂದ ಭೇಟಿಯಾಗಿಲ್ಲ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next