Advertisement

ನಾಯಕರ ಧೋರಣೆಗಳೇ ಮೈತ್ರಿ ಸರ್ಕಾರ ಪತನಕ್ಕೆ ಕಾರಣ

11:19 PM Jul 15, 2019 | Team Udayavani |

ಮದ್ದೂರು: ರಾಜ್ಯದಲ್ಲಿರುವ ಮೈತ್ರಿ ಸರ್ಕಾರ ಪತನದ ಅಂಚಿಗೆ ಬರಲು ಜೆಡಿಎಸ್‌ ಹಾಗೂ ಕಾಂಗ್ರೆಸ್‌ ನಾಯಕರ ಧೋರಣೆಗಳೇ ಕಾರಣ ಎಂದು ಸಂಸದ ವಿ.ಶ್ರೀನಿವಾಸ್‌ಪ್ರಸಾದ್‌ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡ ಅವರಿಗೆ ಸಿದ್ದರಾಮಯ್ಯನವರೇ ದುಷ್ಮನ್‌.

Advertisement

ಸಿದ್ದರಾಮಯ್ಯನವರಿಗೆ ದೇವೇಗೌಡರೇ ದುಷ್ಮನ್‌ ಆಗಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿಯವರ ಮಲತಾಯಿ ಧೋರಣೆ ಹಾಗೂ ಸಚಿವ ರೇವಣ್ಣನವರ ಸರ್ವಾಧಿಕಾರಿ ಧೋರಣೆ ಈ ಎಲ್ಲ ಅವ್ಯವಸ್ಥೆಗಳಿಗೆ ಕಾರಣವಾಗಿದೆ ಎಂದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಹೆಚ್ಚು ಸ್ಥಾನ ಸಿಗದ ಹಿನ್ನೆಲೆಯಲ್ಲಿ ಮೈತ್ರಿ ಮುರಿದು ಬೀಳುವುದಕ್ಕೆ ಸಿದ್ದರಾಮಯ್ಯನವರೇ ಕಾರ್ಯತಂತ್ರ ಹೆಣೆದಿದ್ದಾರೆ ಎಂದು ಶ್ರೀನಿವಾಸ್‌ಪ್ರಸಾದ್‌ ದೂರಿದರು.

ಎಸ್‌.ಎಂ. ಕೃಷ್ಣ ಕಾಂಗ್ರೆಸ್‌ ಬಿಡಬಾರದಿತ್ತು: ಕೇಂದ್ರ ಮಾಜಿ ಸಚಿವ ಎಸ್‌.ಎಂ.ಕೃಷ್ಣ ಅವರು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಬಿಡಬಾರದಿತ್ತು. ಇಲ್ಲವೇ ಆ ಪಕ್ಷ ಬಿಟ್ಟ ಬಳಿಕ ರಾಜಕೀಯ ನಿವೃತ್ತಿ ಪಡೆಯಬೇಕಿತ್ತು ಎಂದು ಹೇಳಿದರು. ಎಸ್‌.ಎಂ.ಕೃಷ್ಣ ಅವರ ರಾಜಕೀಯ ಜೀವನ ಮುಗಿದ ಅಧ್ಯಾಯವಾಗಿದೆ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್‌ ಪಕ್ಷ ಅವರಿಗೆ ಎಲ್ಲವನ್ನೂ ನೀಡಿತ್ತು. ಆದರೆ, ಕಾಂಗ್ರೆಸ್‌ ತೊರೆಯುವ ನಿರ್ಧಾರ ಕೈಗೊಂಡ ಬಳಿಕ ಅವರ ರಾಜಕೀಯ ಜೀವನ ಅಂತ್ಯಗೊಂಡಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next