Advertisement

ಆಮ್ನಿ ಮೇಲೆ ಬಿದ್ದ ಮರ: ಪ್ರಯಾಣಿಕರು ಪಾರು

10:01 AM Nov 18, 2019 | Team Udayavani |

ವೇಣೂರು: ಶನಿವಾರ ಸಂಜೆ ಸುರಿದ ಮಳೆ ಹಾಗೂ ಗಾಳಿಗೆ ರಾಜ್ಯ ಹೆದ್ದಾರಿ 70ರ ಶಾಂತಿನಗರದಲ್ಲಿ ಬೃಹದಾಕಾರದ ಮರವೊಂದು ಚಲಿಸುತ್ತಿದ್ದ ಆಮ್ನಿ ವಾಹನದ ಮೇಲೆ ಬಿದ್ದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಸಂಭವಿಸಿದೆ.

Advertisement

ಮೂಡಬಿದಿರೆ-ವೇಣೂರು ಹೆದ್ದಾರಿಯಲ್ಲಿ ಅರ್ಧ ತಾಸು ಸಂಪರ್ಕ ಕಡಿತಗೊಂಡಿದ್ದು ಪ್ರಯಾಣಿಕರು ಸಮಸ್ಯೆ ಎದುರಿಸಿದರು. ಮರ ಬಿದ್ದ ಕಾರಣ 7 ವಿದ್ಯುತ್‌ ಕಂಬಗಳು ಉರುಳಿದ್ದು ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ.

ಕಳೆದ ಬಾರಿ ಹೆದ್ದಾರಿ ವಿಸ್ತರಣೆ ವೇಳೆ ಅಪಾಯಕಾರಿ ಮರಗಳನ್ನು ತೆರವುಗೊಳಿಸದೇ ಇರುವುದರಿಂದ ಈ ಘಟನೆ ಸಂಭವಿಸಿದೆ ಎಂದು ಸಾರ್ವಜನಿಕರು ದೂರಿದ್ದಾರಲ್ಲದೇ ಇಂತಹ ಅಪಾಯಕಾರಿ ಮರಗಳನ್ನು ಸಂಬಂಧಪಟ್ಟ ಇಲಾಖೆ ಇನ್ನಾದರೂ ತೆರವುಗೊಳಿಸುವಂತೆ ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next