Advertisement

ಮಗುವಿನ ಚಿಕಿತ್ಸೆಗೆ ಆರ್ಥಿಕ ನೆರವು ಹೈಕೋರ್ಟ್‌ ಮೊರೆ ಹೋದ ತಂದೆ

09:07 PM Sep 27, 2021 | Team Udayavani |

ಬೆಂಗಳೂರು: ವಿರಳಾತಿ ವಿರಳ ಅನುವಂಶೀಯ ಕಾಯಿಲೆಯಿಂದ ಬಳಲುತ್ತಿರುವ ತನ್ನ ಒಂದೂವರೆ ವರ್ಷದ ಮಗುವಿನ ಚಿಕಿತ್ಸೆಗೆ 16 ಕೋಟಿ ರೂ. ವೆಚ್ಚವಾಗಲಿದ್ದು, ಆರ್ಥಿಕ ನೆರವು ಒದಗಿಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ತಂದೆಯೊಬ್ಬರು ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ.

Advertisement

ಅಪರೂಪದ ಬೆನ್ನುಮೂಳೆ ಸ್ನಾಯುಗಳ ಕ್ಷೀಣತೆ ಕಾಯಿಲೆಯಿಂದ ಬಳಲುತ್ತಿರುವ ಬೆಂಗಳೂರಿನ ಒಂದೂವರೆ ವರ್ಷದ ಮಗು ಮಾಸ್ಟರ್‌ ಜನೀಶ್‌ ಹೆಸರಲ್ಲಿ ತಂದೆ ಎನ್‌. ನವೀನ್‌ ಕುಮಾರ್‌ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ಏಕದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

ಇದನ್ನೂ ಓದಿ:ದೇವಸ್ಥಾನಕ್ಕೆ ಬೀಗ ದೇವರ ದರ್ಶನಕ್ಕಾಗಿ ಬಾಗಿಲ ಬಳಿ ಕಾದು ನಿಂತ ಬಸವ

ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ಇದು ಮಗುವಿನ ಜೀವನದ ಪ್ರಶ್ನೆಯಾಗಿರುವುದರಿಂದ ಚಿಕಿತ್ಸೆಗೆ ಆರ್ಥಿಕ ನೆರವು ಒದಗಿಸುವ ಬಗ್ಗೆ ಶೀಘ್ರ ನಿಲುವು ತಿಳಿಸಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರಕಾರದ ಸಂಬಂಧಪಟ್ಟ ಇಲಾಖೆಗೆ ನಿರ್ದೇಶಿಸಿತಲ್ಲದೇ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ವೈದ್ಯಕೀಯ ದಾಖಲೆಗಳನ್ನು ಸರಕಾರಕ್ಕೆ ಒದಗಿಸುವಂತೆ ಮಗುವಿನ ತಂದೆ ನವೀನ್‌ಗೆ ನಿರ್ದೇಶಿಸಿ, ವಿಚಾರಣೆಯನ್ನು ಅ.1ಕ್ಕೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next