Advertisement
ಮಹಾಪುರುಷರ ಜಯಂತಿ ನಾವೂ ಮಾಡುತ್ತೇವೆ. ಸರ್ಕಾರ ಮಾಡಿದರೆ ಬೆಂಬಲಿಸುತ್ತೇವೆ. ಇದರಿಂದ ಸಮಾಜಕ್ಕೆ ಒಳ್ಳೆಯ ಸಂದೇಶ ಹೋಗುತ್ತದೆ. ಆದರೆ, ಜನರ ಭಾವನೆಗಳಿಗೆ ಘಾಸಿ ಮಾಡುವ ರೀತಿಯಲ್ಲಿ ಟಿಪ್ಪು, ಬಹಮನಿ ಸುಲ್ತಾನರಂತವರ ಜಯಂತಿ ಏಕೆ ಆಚರಿಸಬೇಕೆಂದು ಪ್ರಶ್ನಿಸಿದ ಯಡಿಯೂರಪ್ಪ, ಬಹಮನಿ ಸುಲ್ತಾನರ ಜಯಂತಿ ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ ಬಿಜೆಪಿ ನಿರ್ಧರಿಸಿದ್ದು, ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ಸಮಾಜಕ್ಕೆ ಒಳ್ಳೆಯ ಸಂದೇಶ ಹೋಗುತ್ತದೆ. ಆದರೆ, ಟಿಪ್ಪು ಸುಲ್ತಾನ್, ಬಹಮನಿ ಸುಲ್ತಾನರ ಜಯಂತಿ ಮಾಡಿದರೆ ಮನಸ್ಸಿಗೆ ನೋವಾಗುತ್ತದೆ. ಇದು ಗೊತ್ತಿದ್ದರೂ ಸರ್ಕಾರ ಸಮಾಜಕ್ಕೆ ಪೂರಕವಲ್ಲದ ವ್ಯಕ್ತಿಗಳ ಜಯಂತಿ ಆಚರಣೆ ಮಾಡುತ್ತಿದ್ದು, ಇದರ ವಿರುದ್ಧ ಹೋರಾಟ ಅನಿವಾರ್ಯ ಎಂದು ಹೇಳಿದರು.
Related Articles
ಅಧ್ಯಕ್ಷ ಡಿ.ಎಸ್.ವೀರಯ್ಯ, ಮಾಜಿ ಸಚಿವ ಮುರುಗೇಶ್ ನಿರಾಣಿ ಮತ್ತಿತರರು ಕಾರ್ಯಕ್ರಮದಲ್ಲಿ ಇದ್ದರು.
Advertisement
ನೃತ್ಯಕ್ಕೆ ಹೆಜ್ಜೆ: ಇದಕ್ಕೂ ಮುನ್ನ ಬಿಜೆಪಿ ಕಚೇರಿ ಆವರಣದಲ್ಲಿ ಸಂತ ಸೇವಾಲಾಲ್ ಜಯಂತಿ ಅಂಗವಾಗಿ ಲಂಬಾಣಿ ಮಹಿಳೆಯರಿಂದ ನೃತ್ಯ ಕಾರ್ಯಕ್ರಮ ನಡೆಯಿತು. ಸಂಸದೆ ಶೋಭಾ ಕರಂದ್ಲಾಜೆ ಮತ್ತು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ ನೃತ್ಯಕ್ಕೆ ಹೆಜ್ಜೆಹಾಕಿದರು.
ಈ ಮಧ್ಯೆ ತಮಗೆ ನೃತ್ಯದ ಮೂಲಕ ಸ್ವಾಗತ ಕೋರಿದ ಲಂಬಾಣಿ ಮಹಿಳೆಯರಿಗೆ ಯಡಿಯೂರಪ್ಪ 2 ಸಾವಿರ ರೂ. ನೋಟು ನೀಡಿಅಭಿನಂದಿಸಿದರು. ಲಂಬಾಣಿ ಮಹಿಳೆಯರು ಯಡಿಯೂರಪ್ಪ ಅವರ ಕಾಲಿಗೆ ನಮಸ್ಕರಿಸಿ ಕೃತಜ್ಞತೆ ವ್ಯಕ್ತಪಡಿಸಿದರು.