ಆಡಳಿತ ದೇಗುಲವಾದ ವಿಧಾನ ಸೌಧದಲ್ಲಿ ಜನಪರವಾದ ಕೆಲಸ ಮಾಡುವುದನ್ನು ಬಿಟ್ಟು ತಾಜ್ವೆಸ್ಟಂಡ್ ಹೊಟೇಲ್ನಲ್ಲಿ ಕುಳಿತು ಆಡಳಿತ ನಡೆಸುತ್ತಿದ್ದಾರೆ. ಕೇವಲ ಅಧಿಕಾರಿಗಳ ವರ್ಗಾವಣೆ ದಂಧೆ ಮಾಡುತ್ತಿರುವ ಇವರಿಗೆ ರೈತರ ಸಂಕಷ್ಟದ ಅರಿವಾಗುತ್ತಿಲ್ಲವೇ ಎಂದು ವಿಧಾನಸಭೆ ವಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿದರು.
Advertisement
ಪಟ್ಟಣದ ಮಂಗಳ ಭವನದಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಕೃತಜ್ಞತಾ ಹಾಗೂ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ನೀವು ಮುಖ್ಯಮಂತ್ರಿಯಾಗಿ ಬಂದ ಮೇಲೆ ರಾಜ್ಯದ ಜನರ ಹಿತವನ್ನು ಕಡೆಗಣಿಸಿದ್ದೀರಿ. ರೈತರ ಜೊತೆಗೆ ಚೆಲ್ಲಾಟ ನಡೆಸುತ್ತಿದ್ದೀರಿ. ಕಬ್ಬು ಬೆಳೆಯುವ ಹೋರಾಟಗಾರರಿಗೆ ಅವಮಾನ ಮಾಡಿದ್ದೀರಿ. ರೈತ ಮಹಿಳೆಗೆ 4 ವರ್ಷಎಲ್ಲಿ ಮಲಗಿದ್ದೆ ಎಂದು ಕೇಳುವ ಮೂಲಕ ಇಡೀ ಮಹಿಳಾ ಸಮುದಾಯಕ್ಕೆ ಮುಖ್ಯಮಂತ್ರಿಯಾದ ನೀವು ಅಪಮಾನ ಮಾಡಿದ್ದೀರಿ. ನಿಮ್ಮ ಸರ್ಕಾರದ ರೈತ ವಿರೋಧಿ ನೀತಿಯ ವಿರುದ್ಧ ಬಿಜೆಪಿ ಹೋರಾಟ ಆರಂಭಿಸಿದೆ. ಬೆಳಗಾವಿ ಅಧಿ ವೇಶನದಲ್ಲಿ ಒಳಗೂ
ಮತ್ತು ಹೊರಗೂ ಬಿಜೆಪಿ ದೊಡ್ಡಮಟ್ಟದ ಹೋರಾಟ ಮಾಡಲಿದ್ದು ಲಕ್ಷಾಂತರ ಜನ ರೈತರು ಸೇರಲಿದ್ದಾರೆ ಎಂದರು.
Related Articles
ಬೆಂಬಲವಾಗಿ ನಿಂತಿರುವ ಸಿದ್ದರಾಮಯ್ಯನವರನ್ನು ಸೋಲಿಸಲು ಚಾಮುಂಡೇಶ್ವರಿಯಲ್ಲಿ ಜಿ.ಟಿ. ದೇವೇಗೌಡರನ್ನು ಬಳಸಿಕೊಂಡಿರಿ. ಬಾದಾಮಿಯಲ್ಲಿ ಸಿದ್ದರಾಮಯ್ಯನವರು ಗೆಲ್ಲದಿದ್ದರೆ ಅವರ ಪರಿಸ್ಥತಿ ಏನಾಗುತ್ತಿತ್ತು. ನಿಮ್ಮ ಬೆಳವಣಿಗೆಗಾಗಿ ಸಮಯಕ್ಕೆ
ಸರಿಯಾಗಿ ಎಲ್ಲರನ್ನು ಬಳಸಿಕೊಳ್ಳುತ್ತೀರಿ ಎಂದು ಜೆಡಿಎಸ್ ಮುಖಂಡರ ವಿರುದ್ಧ ಹರಿಹಾಯ್ದರು.
Advertisement
ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಹೊಸ ಆಯಾಮ ತಂದು ಕೊಟ್ಟವರು ಮೋದಿ. ಮುಂಬರುವ ಚುನಾವಣೆಗೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮತ್ತೂಮ್ಮೆ ಬಿಜೆಪಿ ಅಧಿಕಾರಕ್ಕೆ ತರಲು ಕಾರ್ಯಕರ್ತರು ಕಟಿಬದ್ಧರಾಗಬೇಕು ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಗೌಡ, ಮುಖಂಡರಾದ ಪದ್ಮನಾಭ ಭಟ್, ಕೆ.ಎಸ್. ಗುರುಮೂರ್ತಿ, ಎಸ್. ದತ್ತಾತ್ರಿ. ತಾಪಂ ಅಧ್ಯಕ್ಷ ಕೌಲಿ ಸುಬ್ಬಣ್ಣ ಮತ್ತಿತರರು ಇದ್ದರು.