Advertisement

ವೀಕ್ಷಕರ ಎದುರೇ ಕೈ ಕಾರ್ಯಕರ್ತರ ಕಾಳಗ

08:15 AM Feb 24, 2018 | Team Udayavani |

ಶಿವಮೊಗ್ಗ: ಇಲ್ಲಿನ ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ಶುಕ್ರವಾರ ಪಕ್ಷದ ವೀಕ್ಷಕರ ಎದುರೇ ಹಾಲಿ ಶಾಸಕ ಕೆ.ಬಿ. ಪ್ರಸನ್ನಕುಮಾರ್‌ ಹಾಗೂ ಭದ್ರಾ ಕಾಡಾ ಅಧ್ಯಕ್ಷ ಎಚ್‌.ಎಸ್‌. ಸುಂದರೇಶ್‌ ಬೆಂಬಲಿಗರ ಮಧ್ಯೆ ಗಲಾಟೆ ನಡೆದಿದೆ.

Advertisement

ಎಐಸಿಸಿಯಿಂದ ವೀಕ್ಷಕರಾಗಿ ನಿಯೋಜಿಸಲ್ಪಟ್ಟ ಚಿತ್ರದುರ್ಗ ಲೋಕಸಭಾ ಸದಸ್ಯ ಬಿ.ಎಸ್‌. ಚಂದ್ರಪ್ಪ, ಮಾಜಿ ಸಂಸದ ಮಂಜುನಾಥ್‌ ಕುನ್ನೂರು, ಶುಕ್ರವಾರ ಬೆಳಗ್ಗೆ ಕಾಂಗ್ರೆಸ್‌ ಭವನಕ್ಕೆ ಆಗಮಿಸಿ ವಿಧಾನಸಭೆ ಚುನಾವಣೆಗೆ ಟಿಕೆಟ್‌ ಆಕಾಂಕ್ಷಿಗಳಿಂದ ಅರ್ಜಿ ಸ್ವೀಕರಿಸುತ್ತಿದ್ದರು. ಈ ವೇಳೆ ಕೆ.ಬಿ. ಪ್ರಸನ್ನಕುಮಾರ್‌ಗೆ ಟಿಕೆಟ್‌ ನೀಡಬೇಡಿ ಎಂದು ಭದ್ರಾ ಕಾಡಾ ಅಧ್ಯಕ್ಷ ಎಚ್‌.ಎಸ್‌. ಸುಂದರೇಶ್‌ ಗುಂಪು ಕೈಯಲ್ಲಿ ಪ್ರದರ್ಶನ ಫಲಕಗಳನ್ನು ಪ್ರದರ್ಶಿಸುತ್ತಾ ಕಚೇರಿ ಒಳಗೆ ಬಂದು ಅರ್ಜಿ ಸಲ್ಲಿಸಿ ಹೊರಹೋಯಿತು. ಸ್ಥಳದಲ್ಲಿದ್ದ ಶಾಸಕ ಪ್ರಸನ್ನಕುಮಾರ್‌ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದರು. ಗುಂಪುಗಳ ನಡುವೆ ಮಾತಿನ ಚಕಮಕಿ ನಡೆಯಿತು. ಜೊತೆಗೆ ಫ‌ಲಕ ಮುರಿದು ಹಾಕಿದರು. ವೇಳೆ ಕೆಲವರ ಬಟ್ಟೆ ಅರಿದು ಹೋಯಿತು. ಪೊಲೀಸರು ಸ್ಥಳಕ್ಕಾಗಿಮಿಸಿ ಪರಿಸ್ಥಿತಿ ಸುಧಾರಿಸಿದರು.

ಶಾಸಕ ಕೆ.ಬಿ. ಪ್ರಸನ್ನಕುಮಾರ್‌ಗೆ ಸ್ವಪಕ್ಷದಲ್ಲಿಯೇ ಪ್ರಬಲ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ, ಶಾಸಕರ ಬೆಂಬಲಿಗರು ಪಕ್ಷದ ವೀಕ್ಷಕರ ಮುಂದೆ ಶಾಸಕರಿಗೆ ಟಿಕೆಟ್‌ ನೀಡುವಂತೆ ಅರ್ಜಿ ಸಲ್ಲಿಸಿದ್ದು ವಿಶೇಷವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next