Advertisement
ಎಐಸಿಸಿಯಿಂದ ವೀಕ್ಷಕರಾಗಿ ನಿಯೋಜಿಸಲ್ಪಟ್ಟ ಚಿತ್ರದುರ್ಗ ಲೋಕಸಭಾ ಸದಸ್ಯ ಬಿ.ಎಸ್. ಚಂದ್ರಪ್ಪ, ಮಾಜಿ ಸಂಸದ ಮಂಜುನಾಥ್ ಕುನ್ನೂರು, ಶುಕ್ರವಾರ ಬೆಳಗ್ಗೆ ಕಾಂಗ್ರೆಸ್ ಭವನಕ್ಕೆ ಆಗಮಿಸಿ ವಿಧಾನಸಭೆ ಚುನಾವಣೆಗೆ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಸ್ವೀಕರಿಸುತ್ತಿದ್ದರು. ಈ ವೇಳೆ ಕೆ.ಬಿ. ಪ್ರಸನ್ನಕುಮಾರ್ಗೆ ಟಿಕೆಟ್ ನೀಡಬೇಡಿ ಎಂದು ಭದ್ರಾ ಕಾಡಾ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಗುಂಪು ಕೈಯಲ್ಲಿ ಪ್ರದರ್ಶನ ಫಲಕಗಳನ್ನು ಪ್ರದರ್ಶಿಸುತ್ತಾ ಕಚೇರಿ ಒಳಗೆ ಬಂದು ಅರ್ಜಿ ಸಲ್ಲಿಸಿ ಹೊರಹೋಯಿತು. ಸ್ಥಳದಲ್ಲಿದ್ದ ಶಾಸಕ ಪ್ರಸನ್ನಕುಮಾರ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದರು. ಗುಂಪುಗಳ ನಡುವೆ ಮಾತಿನ ಚಕಮಕಿ ನಡೆಯಿತು. ಜೊತೆಗೆ ಫಲಕ ಮುರಿದು ಹಾಕಿದರು. ವೇಳೆ ಕೆಲವರ ಬಟ್ಟೆ ಅರಿದು ಹೋಯಿತು. ಪೊಲೀಸರು ಸ್ಥಳಕ್ಕಾಗಿಮಿಸಿ ಪರಿಸ್ಥಿತಿ ಸುಧಾರಿಸಿದರು.
Advertisement
ವೀಕ್ಷಕರ ಎದುರೇ ಕೈ ಕಾರ್ಯಕರ್ತರ ಕಾಳಗ
08:15 AM Feb 24, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.