Advertisement

Bengaluru Crime: ನಶೆಯಲ್ಲಿ ಕಾರ್ಮಿಕನನ್ನು ಹತ್ಯೆಗೈದ ಸ್ನೇಹಿತರು ಪರಾರಿ

12:00 PM Aug 25, 2024 | Team Udayavani |

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರೆ ಕಾರ್ಮಿಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ಸಂಪಿಗೆಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಪುಷ್ಪರಾಜ್‌(27) ಮೃತ ಕಾರ್ಮಿಕ. ಸಂಪಿಗೆಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ 80 ಅಡಿ ರಸ್ತೆಯಲ್ಲಿ ಖಾಲಿ ಜಾಗದ ಶೆಡ್‌ನ‌ಲ್ಲಿ ಕೃತ್ಯ ಎಸಗಿ ಆರೋಪಿಗಳು ಪರಾರಿಯಾಗಿದ್ದಾರೆ.

ಅವರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು. ಕೊಲೆ ಯಾದ ಪುಷ್ಪರಾಜ್‌ ಟೈಲ್ಸ್‌ ಕೆಲಸ ಮಾಡುತ್ತಿದ್ದ. ಶುಕ್ರವಾರ ರಾತ್ರಿ ಸ್ನೇಹಿತರ ಜತೆಗೆ ಖಾಲಿ ನಿವೇಶನದಲ್ಲಿ ಪಾರ್ಟಿ ನಡೆ ಸುತ್ತಿದ್ದರು. ಆಗ ಮದ್ಯದ ಅಮಲಿನಲ್ಲಿ ಸ್ನೇಹಿತರ ನಡುವೆ ಗಲಾಟೆಯಾಗಿದೆ. ಈ ಸಂದರ್ಭದಲ್ಲಿ ಸ್ನೇಹಿತರ ನಡುವೆ ನಡೆದ ಕ್ಷುಲ್ಲಕ ವಿಚಾರಕ್ಕೆ ಜಗಳವಾಗಿದೆ. ಅದು ವಿಕೋಪಕ್ಕೆ ಹೋಗಿದ್ದು, ಆಗ ಪುಷ್ಪರಾಜ್‌ನನ್ನು ಕೊಲೆ ಮಾಡಲಾಗಿದೆ.

ಶನಿವಾರ ಸಂಜೆ ಪೊದೆಯಲ್ಲಿ ಮೃತದೇಹ ಪತ್ತೆಯಾಗಿದೆ. ಕೊಲೆಯಾದ ವ್ಯಕ್ತಿಯ ಸಹೋದರ ದೂರು ನೀಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು. ಸಂಪಿಗೇ ಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next