Advertisement

ಸಮಗ್ರತೆ-ಐಕ್ಯತೆ ಎತ್ತಿ ಹಿಡಿಯುವುದೂ ಮೂಲಭೂತ ಹಕ್ಕು

09:59 AM Feb 11, 2020 | sudhir |

ಗಾಂಧಿನಗರ: ದೇಶದ ಏಕತೆ ಮತ್ತು ಸಮಗ್ರತೆಯನ್ನು ಎತ್ತಿ ಹಿಡಿಯುವುದು ಕೂಡ ಮೂಲಭೂತ ಹಕ್ಕುಗಳಲ್ಲಿ ಒಂದು. ಪೌರತ್ವ ಕಾಯ್ದೆ ತಿದ್ದುಪಡಿ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ಮೂಲಕ ಜನರು ಎರಡು ಪರ್ಯಾಯ ವ್ಯವಸ್ಥೆಗಳು ಉಂಟಾಗುವಂತೆ ಮಾಡಬಾರದು ಎಂದು ಸುಪ್ರೀಂಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ಹೇಳಿದ್ದಾರೆ.

Advertisement

ಗುಜರಾತ್‌ನ ಗಾಂಧಿನಗರದಲ್ಲಿ ಗುಜರಾತ್‌ ನ್ಯಾಷನಲ್‌ ಲಾ ಯುನಿವರ್ಸಿಟಿಯಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್‌ ಈ ಬಗ್ಗೆ ವಿಚಾರಣೆ ನಡೆಸುತ್ತಿದೆ. ಕಾಯ್ದೆಯ ಬಗ್ಗೆ ಸಾಂವಿಧಾನಿಕವಾಗಿಯೇ ಪರಿಹಾರ ಕಂಡುಕೊಳ್ಳಬೇಕು ಎಂದರು. ಅಸ್ಸಾಂನಲ್ಲಿ ನಡೆದ ಪ್ರತಿಭಟನೆಗಳನ್ನು ಉಲ್ಲೇಖೀಸಿ ಮಾತನಾಡಿದ ಅವರು, ಕೆಲವೊಂದು ಅಂಶಗಳು ದೇಶದ ಐಕ್ಯತೆ ಮತ್ತು ಸಮಗ್ರತೆಗೆ ಧಕ್ಕೆ ತರುತ್ತವೆ ಎಂದರು. ಸದ್ಯ ಪ್ರಕರಣ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಯ ಹಂತದಲ್ಲಿದೆ. ಹೀಗಿರುವಾಗ ಪ್ರತಿಭಟನಾಕಾರರು ಎರಡು ಪರ್ಯಾಯ ವ್ಯವಸ್ಥೆಗಳು ಸೃಷ್ಟಿಯಾಗುವಂತೆ ಮಾಡಬಾರದು ಎಂದು ಸಲಹೆ ನೀಡಿದ್ದಾರೆ. ಜತೆಗೆ, ಅಸ್ಸಾಂನಲ್ಲಿ ಪ್ರತಿಭಟನೆ ಸ್ಥಗಿತಗೊಳ್ಳುವಲ್ಲಿ ವಿದ್ಯಾರ್ಥಿಗಳ ಪಾತ್ರವನ್ನು ಅವರು ಕೊಂಡಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next