Advertisement

ಇಳಕಲ್ಲ ಶ್ರೀಗಳ ಅಂತ್ಯಕ್ರಿಯೆ ಇಂದು

07:55 AM May 21, 2018 | Team Udayavani |

ಬಾಗಲಕೋಟೆ: ಇಳಕಲ್ಲ ವಿಜಯ ಮಹಾಂತೇಶ್ವರ ಸಂಸ್ಥಾನಮಠದ ಡಾ| ಮಹಾಂತ ಶ್ರೀಗಳು ಕರ್ನಾಟಕದಾದ್ಯಂತ ಸಂಚರಿಸಿ ವ್ಯಸನಮುಕ್ತ ಸಮಾಜ ನಿರ್ಮಿಸುವಲ್ಲಿ ಹಾಗೂ 3ಲಕ್ಷ ಅಧಿಕ ವ್ಯಸನಿಗಳನ್ನು ವ್ಯಸನ ಮುಕ್ತರನ್ನಾಗಿಸಿ ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ಪ್ರಶಸ್ತಿ ಪುರಸ್ಕೃತರಾಗಿದ್ದರು. ಶ್ರೀಗಳಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಜಿ. ಶಾಂತಾರಾಂ ತಿಳಿಸಿದರು.

Advertisement

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ವಂಶಿಕೃಷ್ಣ ಅವರೊಂದಿಗೆ ಇಳಕಲ್ಲಗೆ ತೆರಳಿ ಪೂಜ್ಯರಿಗೆ ಗೌರವ ಪುಷ್ಪ ಅರ್ಪಿಸಿದ ಜಿಲ್ಲಾಧಿಕಾರಿಗಳು, ಮೇ 21 ರಂದು ಮಧ್ಯಾಹ್ನ 1 ಗಂಟೆಗೆ ಇಳಕಲ್ಲ ನಗರದ ಹೊರವಲಯದಲ್ಲಿರುವ ವಿಜಯ ಮಹಾಂತೇಶ ಸಂಸ್ಥಾನಮಠದ ಗದ್ದುಗೆ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನೆರವೇರಲಿದೆ ಎಂದು ಹೇಳಿದರು.

ಅಂತ್ಯಸಂಸ್ಕಾರ ಸಮಯದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ನಿಯೋಜಿತ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಪರವಾಗಿ ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಆಗಮಿಸಿ ಗೌರವ
ಸಲ್ಲಿಸಲಿದ್ದಾರೆ.

ಬಾಗಲಕೋಟೆ ಜಿಲ್ಲಾ ಧಿಕಾರಿ ಕೆ.ಜಿ.ಶಾಂತಾರಾಂ ಮತ್ತು ಎಸ್‌ಪಿ ವಂಶಿಕೃಷ್ಣ ಶ್ರೀಗಳಿಗೆ ಪುಷ್ಪ ಅರ್ಪಿಸಿ ಅಂತಿಮ ನಮನ ಸಲ್ಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next