Advertisement

ರಾಜ್ಯಪಾಲರ ಅಂಗಳದಲ್ಲಿ ಸಮ್ಮಿಶ್ರ ಸರ್ಕಾರದ ಭವಿಷ್ಯ

12:08 AM Jul 08, 2019 | Lakshmi GovindaRaj |

ಬೆಂಗಳೂರು: ಶಾಸಕರ ರಾಜೀನಾಮೆಯಿಂದಾಗಿ ರಾಜ್ಯದ ಸಮ್ಮಿಶ್ರ ಸರ್ಕಾರದ ಭವಿಷ್ಯದ ಚೆಂಡು ಇದೀಗ ರಾಜ್ಯಪಾಲರ ಅಂಗಳದಲ್ಲಿದೆ. 23 ವರ್ಷಗಳ ಹಿಂದೆ ಇದೇ ರೀತಿಯ ಪರಿಸ್ಥಿತಿ ಗುಜರಾತ್‌ನಲ್ಲಿ ನಿರ್ಮಾಣವಾಗಿತ್ತು. ಆಗ ಪ್ರಧಾನಿಯಾಗಿದ್ದ ಎಚ್‌.ಡಿ.ದೇವೇಗೌಡರ ನೇತೃತ್ವದ ಕೇಂದ್ರ ಸರ್ಕಾರ, ಗುಜರಾತ್‌ನಲ್ಲಿ ಸುರೇಶ್‌ ಮೆಹತಾ ನೇತೃತ್ವದ ಬಿಜೆಪಿ ಸರ್ಕಾರವನ್ನು ವಜಾಗೊಳಿಸಿ, ರಾಷ್ಟ್ರಪತಿ ಶಂಕರ್‌ ದಯಾಳ್‌ ಶರ್ಮಾ ಅವರಿಗೆ ಶಿಫಾರಸು ಮಾಡಿತ್ತು.

Advertisement

ಇದರಿಂದಾಗಿ ಆಗ ಗುಜರಾತ್‌ ಸರ್ಕಾರದಲ್ಲಿ ಸಚಿವರಾಗಿದ್ದ ಈಗಿನ ಕರ್ನಾಟಕದ ರಾಜ್ಯಪಾಲ ವಜೂಭಾಯ್‌ ವಾಲಾ ಸಚಿವ ಸ್ಥಾನ ಕಳೆದುಕೊಂಡಿದ್ದರು. ಆಗ ಬಿಜೆಪಿ ನಾಯಕ ಶಂಕರ್‌ಸಿಂಗ್‌ ವಘೇಲಾ ಅವರು ಬಂಡಾಯ ಎದ್ದು, 40 ಶಾಸಕರ ಬೆಂಬಲ ತಮಗಿದೆ ಎಂದು ಹೇಳಿದ್ದರು. ಅಲ್ಲಿನ ರಾಜ್ಯಪಾಲರು ಸದನದಲ್ಲಿ ಬಹುಮತ ಸಾಬೀತು ಪಡಿಸಲು ಸುರೇಶ್‌ ಮೆಹತಾ ಅವರಿಗೆ ಸೂಚನೆ ನೀಡಿದ್ದರು.

ಆದರೆ, ಸುರೇಶ್‌ ಮೆಹತಾ ಅವರು ಬಹುಮತ ಸಾಬೀತುಪಡಿಸುವುದಕ್ಕೂ ಮುನ್ನವೇ ಸರ್ಕಾರವನ್ನು ವಜಾ ಮಾಡಲಾಗಿತ್ತು. ಅಂದು ದೇವೇಗೌಡರ ನೇತೃತ್ವದ ಕೇಂದ್ರ ಸರ್ಕಾರದ ತೀರ್ಮಾನದಿಂದ ಸಚಿವ ಸ್ಥಾನ ಕಳೆದುಕೊಂಡಿದ್ದ ವಜೂಭಾಯ್‌ ವಾಲಾ ಅವರು ಈಗ ಕರ್ನಾಟಕದ ರಾಜ್ಯಪಾಲರಾಗಿದ್ದಾರೆ. ಸಮ್ಮಿಶ್ರ ಸರ್ಕಾರದ “ಭವಿಷ್ಯ’ ಅವರ ಅಂಗಳದಲ್ಲಿದೆ.

Advertisement

Udayavani is now on Telegram. Click here to join our channel and stay updated with the latest news.

Next