Advertisement

ಎಸ್‌ಐಟಿಗೆ ಗೌರಿ ಹಂತಕರ ಸುಳಿವು ಲಭ್ಯ

09:03 AM Oct 03, 2017 | |

ಕೋಲಾರ: ಪತ್ರಕರ್ತೆ ಗೌರಿ ಲಂಕೇಶ್‌ ಹಂತಕರ ಸುಳಿವು ಎಸ್‌ಐಟಿ ತಂಡಕ್ಕೆ ಸಿಕ್ಕಿದ್ದು, ಸೂಕ್ತ ಸಾಕ್ಷ್ಯಾಧಾರ ಕಲೆ ಹಾಕಿದ ನಂತರ ಚಾರ್ಜ್‌ಶೀಟ್‌ ಸಲ್ಲಿಸಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

Advertisement

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಡ, ಬಲ ಯಾರ ಮೇಲೂ ನಾನು ಆರೋಪ ಮಾಡಲ್ಲ, ಇದು ಸೂಕ್ಷ್ಮ ಪ್ರಕರಣವಾಗಿದ್ದು, ಸೂಕ್ತ ಸಾಕ್ಷ್ಯಾಧಾರಗಳನ್ನು ಪಡೆಯದೇ ಪ್ರಕರಣ ದಾಖಲಿಸಿದರೆ ನ್ಯಾಯಾಲಯದಲ್ಲಿ ಹಿನ್ನಡೆಯಾಗುವ ಸಾಧ್ಯತೆ ಇರುವುದರಿಂದ ಎಸ್‌ಐಟಿ ಸಾಕ್ಷಿ ಕಲೆ ಹಾಕುವ ಕಾರ್ಯದಲ್ಲಿ ನಿರತವಾಗಿದೆ ಎಂದರು. 

ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಮೂರೂ ಪಕ್ಷಗಳಲ್ಲೂ ಮುಖ್ಯಮಂತ್ರಿಯಾಗಲು ನಾಯಕರಿದ್ದಾರೆ. ಆದರೆ, ಕಾಂಗ್ರೆಸ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆಗೆ ಹೋಗುವುದರಿಂದ ಅವರೇ ಮುಂದಿನ ಮುಖ್ಯಮಂತ್ರಿಯೂ ಆಗ್ತಾರೆ, ದಸರಾ ಉದ್ಘಾಟನೆಯನ್ನು ಮಾಡ್ತಾರೆ ಎಂದು ಇದೇ ವೇಳೆ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next