Advertisement

ಹೊಲದಲ್ಲಿ ಬೆಳೆದಿದ್ದ ಶುಂಠಿ ಬೆಳೆ ಕದ್ದೊಯ್ದರು!

09:36 PM Jul 18, 2023 | Team Udayavani |

ಹುಣಸೂರು: ಹೊಲದಲ್ಲಿ ಬೆಳೆದಿದ್ದ ಶುಂಠಿ ಬೆಳೆಯನ್ನು ಕಳ್ಳರು ರಾತ್ರಿ ವೇಳೆ ಕೊಯ್ದುಕೊಂಡು ಹೋಗಿರುವ ಘಟನೆ ತಾಲೂಕಿನ ಹನಗೋಡು ಹೋಬಳಿಯ ಸಣ್ಣೇನಹಳ್ಳಿ ಚಂದ್ರೇಗೌಡರ ಜಮೀನಿನಲ್ಲಿ ನಡೆದಿದೆ.

Advertisement

ತಾಲೂಕಿನ ಚೆನ್ನಸೋಗೆಯ ಪ್ರಸನ್ನಕುಮಾರ್‌ ಹೊಸಕೋಟೆಯ ಶ್ರೀನಿವಾಸ್‌, ದೇವೇಂದ್ರ ಸೇರಿ ಮೂವರು ಸಣ್ಣೇನಹಳ್ಳಿಯ ಚಂದ್ರೇಗೌಡ ಮತ್ತಿತರ ರೈತರಿಂದ ಒಟ್ಟು 15 ಎಕರೆ ಜಮೀನನ್ನು ಗುತ್ತಿಗೆ ಪಡೆದು ಶುಂಠಿ ಬೆಳೆದಿದ್ದರು. ಬೆಳೆಯೂ ಉತ್ತಮವಾಗಿ ಬಂದಿದ್ದು, ಶನಿವಾರ ರಾತ್ರಿ ಅರ್ಧ ಎಕರೆಯಲ್ಲಿದ್ದ ಶುಂಠಿ ಬೆಳೆಯನ್ನು ಕೊಯ್ದುಕೊಂಡು ಹೋಗಿದ್ದಾರೆ. ಈ ಬಗ್ಗೆ ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಶುಂಠಿ ಬೆಲೆ ಗಗನಕ್ಕೇರಿರುವುದರಿಂದ ಬೆಳೆ ಮೇಲೂ ಕಳ್ಳರು ಕಣ್ಣು ಹಾಯಿಸಿದ್ದು, ರೈತರು ಕಷ್ಟಪಟ್ಟು ಬೆಳೆದ ಬೆಳೆಯೂ ದಕ್ಕದಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next