Advertisement

Ambedkarnagar: ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಬಾಲಕಿ ಬಲಿ!

11:38 PM Sep 17, 2023 | Team Udayavani |

ಅಂಬೇಡ್ಕರ್‌ನಗರ: ಉತ್ತರ ಪ್ರದೇಶದ ಅಂಬೇಡ್ಕರ್‌ನಗರದಲ್ಲಿ ಕಿಡಿಗೇಡಿ ಗಳಿಂದ ನಡೆದ ಲೈಂಗಿಕ ದೌರ್ಜನಕ್ಕೆ ಬಾಲಕಿಯೊಬ್ಬಳು ಪ್ರಾಣ ಕಳೆದು ಕೊಂಡಿದ್ದಾಳೆ.

Advertisement

ಶಾಲೆ ಮುಗಿಸಿಕೊಂಡು ಇಬ್ಬರು ಬಾಲಕಿಯರು ಶುಕ್ರವಾರ ಮಧ್ಯಾಹ್ನ ತಮ್ಮ ಸೈಕಲ್‌ಗ‌ಳಲ್ಲಿ ಮನೆಗೆ ಮರಳುತ್ತಿದ್ದರು. ಮುಖ್ಯ ರಸ್ತೆಯಲ್ಲಿ ತೆರಳುತ್ತಿದ್ದ ಸಮಯದಲ್ಲಿ ಮೂವರು ಕಿಡಿಗೇಡಿಗಳು ಎರಡು ಬೈಕ್‌ಗಳಲ್ಲಿ ಬಂದಿದ್ದಾರೆ. ಈ ವೇಳೆ ಬಾಲಕಿಯನ್ನು ಛೇಡಿಸಿದ್ದು, ಆಕೆಯ ದುಪಟ್ಟಾವನ್ನು ಹಿಡಿದು ಎಳೆದಿದ್ದಾರೆ. ಇದರಿಂದ ಆಯತಪ್ಪಿ ಬಾಲಕಿ ರಸ್ತೆಗೆ ಬಿದ್ದಿದ್ದಾಳೆ. ಇದೇ ವೇಳೆ ಹಿಂದಿನಿಂದ ಬರುತ್ತಿದ್ದ ಕಿಡಿಗೇಡಿಗಳ ಸಹಚರನಿದ್ದ ಮತ್ತೂಂದು ಬೈಕ್‌, ಬಾಲಕಿಯ ಮೇಲೆ ಹರಿದಿದೆ. ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ನ್ಯಾನ್ಸಿ ಮೃತ ಬಾಲಕಿಯಾಗಿದ್ದಾಳೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಕಿಡಿಗೇಡಿಗಳ ವಿರುದ್ಧ ಜಾಲತಾಣಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರೋಪಿಗಳಾದ ಶಹನವಾಜ್‌, ಅರ್ಬಾಜ್‌ ಮತ್ತು ಫೈಸಲ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೊಂದೆಡೆ, ಆರೋಪಿಗಳನ್ನು ವೈದ್ಯಕೀಯ ತಪಾಸಣೆಗೆ ಕರೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಆರೋಪಿಗಳು ಪೊಲೀಸರ ಬಂದೂಕು ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next