Advertisement

ಬಾಲಕಿ ಮೇಲೆ ಅತ್ಯಾಚಾರ,ಹತ್ಯೆ ಖಂಡಿಸಿ ಪ್ರತಿಭಟನೆ

10:10 AM Dec 22, 2017 | |

ಬೆಂಗಳೂರು: ವಿಜಯಪುರದಲ್ಲಿ ಅಪ್ರಾಪ್ತ ಬಾಲಕಿ ಮೇಲಿನ ಪೈಶಾಚಿಕ ಕೃತ್ಯ ಖಂಡಿಸಿ ಮತ್ತು ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ದಸಂಸ ಟೌನ್‌ಹಾಲ್‌ ಮುಂದೆ ಗುರುವಾರ ಬೃಹತ್‌ ಪ್ರತಿಭಟನೆ ನಡೆಸಿತು. ಸಮಿತಿ ರಾಜ್ಯಾಧ್ಯಕ್ಷ ಡಾ.ಸಿಎಸ್‌.ರಘು ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತರು, ರಾಜ್ಯದಲ್ಲಿ ದಲಿತರ ಮೇಲೆ ಬಹಳಷ್ಟು ಶೋಷಣೆ ನಡೆಯುತ್ತಿದ್ದರೂ ರಾಜಕೀಯ ಪಕ್ಷಗಳು ದನಿ ಎತ್ತುತ್ತಿಲ್ಲ.

Advertisement

ಅಲ್ಲದೆ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. ಇದರ ಪರಿಣಾಮ ವಿಜಯಪುರದಲ್ಲಿ ಬಾಲಕಿಯನ್ನು ಶಾಲೆಯ ಸಮೀಪವೇ ಅಪಹರಿಸಿ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದರು. ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಬಹಳಷ್ಟು ಪ್ರಭಾವಿಗಳ ಕೈವಾಡವಿದ್ದು, ಆರೋಪಿಗಳನ್ನು ರಕ್ಷಿಸಲು ಪ್ರಯತ್ನಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next